ದಾವಣಗೆರೆ: ಎದುರಿಗೆ ಬಂದ ಬೈಕ್ ಅಪಘಾತ ತಪ್ಪಿಸಲು ಹೋಗಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುಂಕುವ ಗ್ರಾಮದ ಸಮೀಪದ ದಾಸರಹಟ್ಟಿ-ಪಲವನಹಳ್ಳಿ ಗ್ರಾಮದ ಬಳಿ ನಡೆದಿದೆ
ತಾಲೂಕಿನ ಮಾಚಿ ಗೊಂಡನಹಳ್ಳಿ ಗ್ರಾಮದಿಂದ
ಟ್ರ್ಯಾಕ್ಟರ್ನಲ್ಲಿ ಮಣ್ಣು ತುಂಬಿ ಕುಂಕುವ ಗ್ರಾಮದ ಹೊಲವೊಂದಕ್ಕೆ ಮಣ್ಣು ಸುರಿದು ವಾಪಸ್ ಮರುಳುವಾಗ ಏಕಾಏಕಿ ಬಂದ ಬೈಕನ್ನು ತಪ್ಪಿಸಲು ಹೋಗಿ ಟ್ರ್ಯಾಕ್ಟರ್ ಪಲ್ಟಿ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಮಾಚಿಗೊಂಡನಹಳ್ಳಿ ಗ್ರಾಮದ ಹಳದಪ್ಪ ಅವರ ಪುತ್ರ ಸುಹಾಸ್ (22) ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



