ಯಶಸ್ವಿನಿ ಯೋಜನೆ ಚಿಕಿತ್ಸಾ ವೆಚ್ಚದ ದರ ಏರಿಕೆ; ಒಂದು ವಾರದಲ್ಲಿ ಚಿಕಿತ್ಸೆ ವೆಚ್ಚ‌ ಪಾವತಿಗೆ ಕ್ರಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಯಶಸ್ವಿನಿ ಯೋಜನೆ ಚಿಕಿತ್ಸಾ ವೆಚ್ಚದ ದರ ಹೆಚ್ಚಿಸಲಾಗಿದೆ. ಆಯುಷ್ಮಾನ್ ಭಾರತ್-ಆರ್ರೋಗ್ಯ ಕರ್ನಾಟಕ ಮಾದರಿಯಲ್ಲಿ ಯಶಸ್ವಿನಿ ಯೋಜನೆ ದರ ಪರಿಷ್ಕರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ದರವನ್ನು ಎಲ್ಲರೂ ಒಪ್ಪಿದ್ದಾರೆ. ಯಶಸ್ವಿನಿ ದರ ಬಹಳ ಕಡಿಮೆ ಇತ್ತು. ಈ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲು ಯಾರೂ ಮುಂದೆ ಬರುತ್ತಿರಲಿಲ್ಲ. ದರ ಪರಿಷ್ಕರಣೆ ಮಾಡಿರುವುದರಿಂದ ಆಸ್ಪತ್ರೆ ಎಂಪ್ಯಾನಲ್ಮೆಂಟ್ ಆಗುತ್ತಿವೆ. ರೈತರು ಎನ್‌ರೋಲ್ ಮೆಂಟ್ ಆಗುತ್ತಿದ್ದಾರೆ

ಕೆಲವು ಆಸ್ಪತ್ರೆಗಳ ಸುಮಾರು 25 ರಿಂದ 26 ಕೋಟಿ ರೂ. ಪಾವತಿ ಬಾಕಿ ಇದೆ. ಅದನ್ನು ಪಾವತಿಸುವ ಕುರಿತು ಇನ್ನೂ ತೀರ್ಮಾನ ಕೈಗೊಂಡಿಲ್ಲ. ಆದರೆ, ಈಗ ಒಂದು ವಾರದಲ್ಲೇ ಆಸ್ಪತ್ರೆಗಳಿಗೆ ಚಿಕಿತ್ಸಾ ವೆಚ್ಚ ಪಾವತಿ ಆಗುವ ಹಾಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಯಶಸ್ವಿನಿ ಯೋಜನೆಯಡಿ ಚಿಕಿತ್ಸಾ ದರ ಪರಿಷ್ಕರಿಸಿರುವುದರಿಂದ ಹಳೆ, ಹೊಸ ಆಸ್ಪತ್ರೆಗಳೂ ಎಂಪ್ಯಾನಲ್ ಆಗುತ್ತಿವೆ. ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಹೊಸ ದರ ನಿಗದಿ ಮಾಡಿರುವುದರಿಂದ ಸರ್ಕಾರಕ್ಕೆ ಹೊರೆ ಆಗುತ್ತದೆ. ಆದಾಗ್ಯೂ ನಾವು ಎಲ್ಲ ಆಸ್ಪತ್ರೆಗಳಿಗೆ ಒಂದು ವಾರದಲ್ಲಿ ಪೇಮೆಂಟ್ ಮಾಡುತ್ತಿದ್ದೇವೆ. ಹಳೆಯ ಬಾಕಿ ಹಣ ಪಾವತಿ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿದೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *