ಬೆಂಗಳೂರು: ಯಶಸ್ವಿನಿ ಯೋಜನೆ ಚಿಕಿತ್ಸಾ ವೆಚ್ಚದ ದರ ಹೆಚ್ಚಿಸಲಾಗಿದೆ. ಆಯುಷ್ಮಾನ್ ಭಾರತ್-ಆರ್ರೋಗ್ಯ ಕರ್ನಾಟಕ ಮಾದರಿಯಲ್ಲಿ ಯಶಸ್ವಿನಿ ಯೋಜನೆ ದರ ಪರಿಷ್ಕರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ದರವನ್ನು ಎಲ್ಲರೂ ಒಪ್ಪಿದ್ದಾರೆ. ಯಶಸ್ವಿನಿ ದರ ಬಹಳ ಕಡಿಮೆ ಇತ್ತು. ಈ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲು ಯಾರೂ ಮುಂದೆ ಬರುತ್ತಿರಲಿಲ್ಲ. ದರ ಪರಿಷ್ಕರಣೆ ಮಾಡಿರುವುದರಿಂದ ಆಸ್ಪತ್ರೆ ಎಂಪ್ಯಾನಲ್ಮೆಂಟ್ ಆಗುತ್ತಿವೆ. ರೈತರು ಎನ್ರೋಲ್ ಮೆಂಟ್ ಆಗುತ್ತಿದ್ದಾರೆ
ಕೆಲವು ಆಸ್ಪತ್ರೆಗಳ ಸುಮಾರು 25 ರಿಂದ 26 ಕೋಟಿ ರೂ. ಪಾವತಿ ಬಾಕಿ ಇದೆ. ಅದನ್ನು ಪಾವತಿಸುವ ಕುರಿತು ಇನ್ನೂ ತೀರ್ಮಾನ ಕೈಗೊಂಡಿಲ್ಲ. ಆದರೆ, ಈಗ ಒಂದು ವಾರದಲ್ಲೇ ಆಸ್ಪತ್ರೆಗಳಿಗೆ ಚಿಕಿತ್ಸಾ ವೆಚ್ಚ ಪಾವತಿ ಆಗುವ ಹಾಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಯಶಸ್ವಿನಿ ಯೋಜನೆಯಡಿ ಚಿಕಿತ್ಸಾ ದರ ಪರಿಷ್ಕರಿಸಿರುವುದರಿಂದ ಹಳೆ, ಹೊಸ ಆಸ್ಪತ್ರೆಗಳೂ ಎಂಪ್ಯಾನಲ್ ಆಗುತ್ತಿವೆ. ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಹೊಸ ದರ ನಿಗದಿ ಮಾಡಿರುವುದರಿಂದ ಸರ್ಕಾರಕ್ಕೆ ಹೊರೆ ಆಗುತ್ತದೆ. ಆದಾಗ್ಯೂ ನಾವು ಎಲ್ಲ ಆಸ್ಪತ್ರೆಗಳಿಗೆ ಒಂದು ವಾರದಲ್ಲಿ ಪೇಮೆಂಟ್ ಮಾಡುತ್ತಿದ್ದೇವೆ. ಹಳೆಯ ಬಾಕಿ ಹಣ ಪಾವತಿ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿದೆ ಎಂದರು.



