ದಾವಣಗೆರೆ: ಹೊನ್ನಾಳಿಯಲ್ಲಿ ಕನಕದಾಸರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಹೊನ್ನಾಳಿ ಪಟ್ಟಣದಲ್ಲಿ ಟಿ.ಬಿ.ವೃತ್ತದಲ್ಲಿ ಕುರುಬ ಸಮಾಜದಿಂದ ನಿರ್ಮಿಸಿದ ಕನಕದಾಸರ ಕಂಚಿನ ಪ್ರತಿಮೆಯನ್ನು ಸಿಎಂ‌ ಸಿದ್ದರಾಮಯ್ಯ ಅನಾವರಣ ಮಾಡಿದರು.

ನಂತರ ಮಾತಡಿದ ಅವರು, ಕುರುಬ ಸಮಾಜ ಹಾಗೂ ಇತರೆ ಎಲ್ಲರೂ ಸೇರಿ ಕನಕದಾಸರ ಪ್ರತಿಮೆ ಸ್ಥಾಪಿಸುವ ಕಾರ್ಯ ಮಾಡಿದ್ದಾರೆ. ದಾಸಶ್ರೇಷ್ಟ ಕನಕದಾಸರ ಪ್ರತಿಮೆ ಲೋಕಾರ್ಪಣೆ ಮಾಡಿದ್ದೇನೆ. ಜೀವಕ್ಕೆ ಯಾವ ಕುಲವಿದೆ, ನಮ್ಮ ಶರೀರದಲ್ಲಿನ ರಕ್ತಕ್ಕೆ ಯಾವ ಜಾತಿಯ ಲೇಪನವೂ ಇಲ್ಲ, ತುರ್ತು ಸಂದರ್ಭದಲ್ಲಿ ಬದುಕಲು ಯಾರ ರಕ್ತವನ್ನಾದರೂ ಪಡೆದು ನಮ್ಮ ಜೀವ ಉಳಿಸಿಕೊಳ್ಳುತ್ತೇವೆ ಈ ನಿಟ್ಟಿನಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕೆಂದರು.

ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದರು, ಆದರೆ ಕುರುಬರಾಗಿ ಉಳಿದಿರಲಿಲ್ಲ, ವಿಶ್ವಮಾನವರಾಗಿದ್ದರು. ಆದರೆ ನಾವುಗಳು ಹುಟ್ಟಿದಾಗ ವಿಶ್ವಮಾನವರಾಗುತ್ತೇವೆ, ಕೊನೆಯಲ್ಲಿ ಅಲ್ಪಮಾನವರು. ಆದರೆ ಬುದ್ದ, ಬಸವ, ಕನಕ, ಅಂಬೇಡ್ಕರ್, ಗಾಂಧೀಜಿ ಇವರೆಲ್ಲಾ ಜನರಿಗೆ ನೀಡಿದ ಸಂದೇಶ ವಿಶ್ವ ಮಾನವರಾಗಲು, ನಾವೆಲ್ಲರೂ ಮನುಷ್ಯರಾಗಲು ಪ್ರಯತ್ನ ಮಾಡಿ ದ್ವೇಷಿಸದೇ, ಪರಸ್ಪರ ಪ್ರೀತಿಸೋಣ ಎಂದರು.
ಬಸವಾದಿ ಶರಣರು, ಕನಕದಾಸರು ಹೇಳಿದ್ದು ಜಾತಿ ರಹಿತ, ವರ್ಗ ರಹಿತ ಸಮಾಜ ನಿರ್ಮಾಣದ ತತ್ವವನ್ನು ಸಾರಿದರು. ಇದನ್ನು ಅರಿಯಲು ವಚನಗಳು ಮತ್ತು ಕೀರ್ತನೆಗಳನ್ನು ಓದಲು ಮುಂದಾಗಬೇಕು.

ಕನಕದಾಸರು ಸಮಾಜ ಸುಧಾರಕ, ದಾರ್ಶನಿಕ, ವಿಶ್ವಮಾನವ, ನಾವೆಲ್ಲರೂ ಇವರ ತತ್ವಾದರ್ಶ ಆರ್ಥ ಮಾಡಿಕೊಳ್ಳಲಿ ಎಂದು ಇಂತಹ ಪ್ರತಿಮೆಗಳ ಅನಾವರಣ ಮಾಡುವ ಕೆಲಸ ಮಾಡಲಾಗುತ್ತಿದೆ. ಇವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಇದರ ಸಾರ್ಥಕತೆಯಾಗುತ್ತದೆ ಎಂದರು.
ಮುಖ್ಯಮಂತ್ರಿಗಳು ಇದಕ್ಕೂ ಮೊದಲು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಿ.ಜಿ.ಶಾಂತನಗೌಡ, ಕೆ.ಎಸ್.ಬಸವಂತಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಅಬ್ದುಲ್ ಜಬ್ಬರ್, ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಮಾಜಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಆರ್.ಪ್ರಸನ್ನಕುಮಾರ್, ಇನ್‍ಸೈಟ್ ವಿನಯ್‍ಕುಮಾರ್, ಮುಖಂಡರಾದ ಮಂಜಪ್ಪ, ಜಯಸಿಂಹ, ಸುಭಾಶ್ಚಂದ್ರ, ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಎಂ.ಎಸ್.ಫಾಲಾಕ್ಷಪ್ಪ ಹಾಗೂ ಇನ್ನಿತರೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *