ದಾವಣಗೆರೆ: ಸಾರ್ವಜನಿಕರು ತಮ್ಮಲ್ಲಿರುವ ಅಘೋಷಿತ ವನ್ಯಜೀವಿ, ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಪಿಗಳು ಮತ್ತು ಸಂಸ್ಕರಿಸಿದ ಟ್ರೋಪಿಗಳನ್ನು ಅರಣ್ಯ ಇಲಾಖೆ, ಎಸಿಎಫ್, ಡಿಸಿಎಫ್ ಕಚೇರಿಗೆ ನೀಡಲು 90 ದಿನಗಳ ಕಾಲಾವಕಾಶ ನೀಡಲಾಗಿದೆ.
ವಾಪಸ್ ನೀಡಲು ಏ.11 ರಂದು ಕೊನೆಯ ದಿನವಾಗಿದ್ದು, ದಾವಣಗೆರೆ ಜಿಲ್ಲೆಯ ಸಾರ್ವಜನಿಕರು ತಮ್ಮಲ್ಲಿರುವ ವನ್ಯಜೀವಿ ಅಂಗಾಗಳಾದ ಹುಲಿ ಉಗುರು, ಚಿರತೆ ಉಗುರು, ಆನೆದಂತ, ಜಿಂಕೆ ಕೊಂಬು, ವನ್ಯಪ್ರಾಣಿಗಳ ಚರ್ಮ, ವನ್ಯಜೀವಿ ವಸ್ತುಗಳು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಹೊಂದಿದ್ರೆ ಅಧ್ಯರ್ಪಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಪ್ರಾದೇಶಿಕ ವಲಯ ಕಚೇರಿ, ಮೊ. ನಂ:9481991703, ಜಗಳೂರು ಪ್ರಾದೇಶಿಕ ವಲಯ ಕಚೇರಿ, ಮೊ.9481991705, ಹೊನ್ನಾಳಿ ಪ್ರಾದೇಶಿಕ ವಲಯ ಕಚೇರಿ, ಮೊ.9481991704, ಹೊಸಕೆರೆ ರಂಗಯ್ಯನದುರ್ಗ ವನ್ಯಜೀವಿ ವಲಯ, ಮೊ. 9481991706, ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ದಾವಣಗೆರೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.



