ದಾವಣಗೆರೆ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ದಾವಣಗೆರೆ ‘ಸಿ’ ವರ್ಗದಿಂದ ಆಯ್ಕೆಯಾದ ಕೋಗುಂಡಿ ಬಕ್ಕೇಶಪ್ಪ ಹಾಗೂ ಉಪಾಧ್ಯಕ್ಷರಾಗಿ ಹರಿಹರ ‘ಎ’ವರ್ಗ ಡಿ.ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಇಬ್ಬರು ಅಭ್ಯರ್ಥಿ ಹೊರತುಪಡಿಸಿ ಯಾರು ಕೂಡ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದರು.
15 ನಿರ್ದೇಶಕರ ಪೈಕಿ 2 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 10 ಜನರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹಾಗೂ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಹೆಚ್ಚು ಸ್ಥಾನ ಪಡೆದ ಕಾಂಗ್ರೆಸ್ ಪಕ್ಷ ಡಿಸಿಸಿ ಬ್ಯಾಂಕ್ ಅಧಿಕಾರಕ್ಕೇರಿದೆ. ಇದಕ್ಕೂ ಮೊದಲು ಬಿಜೆಪಿ ಅಧಿಕಾರದಲ್ಲಿತ್ತು.



