ದಾವಣಗೆರೆ: ದೇಶ ವಿಭಜನೆ ‌ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿದ ಮಾಜಿ ಡಿಸಿಎಂ‌ ಈಶ್ವರಪ್ಪ ವಿರುದ್ಧ ದೂರು ದಾಖಲು‌

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ನಗರದ ಬಡಾವಣೆ ಠಾಣೆಯಲ್ಲಿ ನಿಜಲಿಂಗಪ್ಪ ಬಡಾವಣೆಯ ಹನುಮಂತ ಎಫ್‌ಐಆರ್ ದಾಖಲಿಸಿದ್ದಾರೆ.

ಕೆ.ಎಸ್. ಈಶ್ವರಪ್ಪ ಅವರು ಫೆ.08 ರಂದು ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಈ ಹೇಳಿಕೆ ನೀಡಿದ್ದತು. ಇಂತಹ ಹೇಳಿಕೆಯಿಂದ ಜನ, ಸಮುದಾಯ, ಗುಂಪುಗಳ ನಡುವೆ ದ್ವೇಷ ಭಾವನೆಯನ್ನು ಉಂಟು ಮಾಡುತ್ತದೆ. ಹೀಗಾಗಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಈಶ್ವರಪ್ಪ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿದ್ದಾರೆ.

ಸಂಸದ ಡಿ.ಕೆ.ಸುರೇಶ, ಶಾಸಕ ವಿನಯ್ ಕುಲಕರ್ಣಿ ಕೊಲ್ಲೋ ಕಾನೂನು ತರಬೇಕು ಎಂದು ಪ್ರಾಣ ಬೆದರಿಕೆ ಹಾಕಿರುವ ಹೇಳಿಕೆಯಿಂದ ಗಲಭೆಗಳು ಜರುಗಬಹುದು ಎಂದು ಗೊತ್ತಿದ್ದರೂ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಜನರ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿಜಲಿಂಗಪ್ಪ ಬಡಾವಣೆಯ ಹನುಮಂತ ಎಂಬುವರು ನೀಡಿದ ದೂರನ್ನು ಆಧರಿಸಿ ಐಪಿಸಿ 505(1)(ಸಿ), 505(2) ಮತ್ತು 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *