ದಾವಣಗೆರೆ: ವಿಕಲಚೇತನರೊಬ್ಬರ ಮಾಶಾಸನ ಪ್ರಮಾಣ ಪತ್ರ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆ ನ್ಯಾಮತಿ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಸನವನಹಳ್ಳಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಗಣೇಶ್ , ಸರ್ಕಾರದಿಂದ ಮುಂಜೂರಾದ ಮಾಶಾಸನ ಪ್ರಮಾಣ ಪತ್ರ ನೀಡಲು 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಿವ್ಯಾಂಗ ಹರ್ಷ ಎಂಬವರು ಮಾಶಾಸನ ಪತ್ರ ಮಾಡಿಸಲು ನ್ಯಾಮತಿ ನಾಡ ಕಚೇರಿಗೆ ಅರ್ಜಿ ಸಲ್ಲಿಸಲಾಗಿತ್ತು. ಪ್ರಮಾಣ ಪತ್ರ ನೀಡಲು ಗ್ರಾಮ ಲೆಕ್ಕಾಧಿಕಾರಿ ಗಣೇಶ್ 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಹರ್ಷ ಲೋಕಾಯುಕ್ತಕ್ಕೆ ಮಾಹಿತಿ ನೀಡಿ, ಗ್ರಾಮ ಲೆಕ್ಕಾಧಿಕಾರಿಯನ್ನು ಹಣ ಸಮೇತ ಸಿಕ್ಕಿ ಹಾಕಿಕೊಳ್ಳುವಂತೆ ಮಾಡಿದ್ದಾರೆ.



