ಡಿವಿಜಿ ಸುದ್ದಿ, ಬೆಂಗಳೂರು: ಮಂಗಳೂರು ಬಾಂಬ್ ಪತ್ತೆ ಪ್ರಕಣದಲ್ಲಿ ಮಿಣಿ ಮಿಣಿ ಪೌಡರ್ ಎಂದಿದ್ದಕ್ಕೆ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಟ್ರೋಲ್ ಗೆ ಗುರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಟ್ರೋಲಿಗರ ವಿರುದ್ಧ ಸರಣಿ ಟ್ವೀಟ್ ಮೂಲಕ ತರಾಟೆಗೆ ತಗೆದುಕೊಂಡಿದ್ದಾರೆ.
ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಕುಮಾರ ಸ್ವಾಮಿ ಮಿಣಿ ಮಿಣಿ ಪದದ ಅರ್ಥ ಹೇಳಿದ್ದಾರೆ. ಮಿಣಿ ಮಿಣಿ ಇದು ಶುದ್ಧ ಕನ್ನಡ ಪದವಾಗಿದ್ದು, ಗ್ರಾಮೀಣ ಭಾಗದ ಜನರು ಈ ಪದವನ್ನು ಬಳಕೆ ಮಾಡುತ್ತಾರೆ. ಬಿಜೆಪಿಯವರ ಜಿನ್ಸ್ ಪಾಕಿಸ್ತಾನ ಆಗಿರುವುದರಿಂದ ಅವರಿಗೆ ಕನ್ನಡ ಪದಗಳ ಬಗ್ಗೆ ತಾತ್ಸಾರವಿದ್ದು ಅವರು ಗ್ರಾಮೀಣ ಕರ್ನಾಟಕವನ್ನು ಅಪಮಾನಿಸಿದ್ದಾರೆ ಎಂದು ಟ್ವೀಟ್ ನಲ್ಲಿಯೇ ಕುಟುಕಿದ್ದಾರೆ.
ಗ್ರಾಮೀಣ ಕನ್ನಡದಲ್ಲಿ ಹೊಳೆಯುವ ಪದಾರ್ಥಕ್ಕೆ ಮಿಣಿಮಿಣಿ ಎನ್ನಲಾಗುತ್ತದೆ. ಅದು ಶುದ್ಧ ಕನ್ನಡ, ಗ್ರಾಮೀಣ ಪದ. ಅದನ್ನೇ ಅಪಮಾನಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರೆ ಅದು ಕನ್ನಡಕ್ಕೆ, ಗ್ರಾಮೀಣ ಕರ್ನಾಟಕಕ್ಕೆ ಮಾಡಿದ ಅಪಮಾನ. ಎಷ್ಟೇ ಆಗಲಿ ಬಿಜೆಪಿಗರ ಜೀನ್ ಪಾಕಿಸ್ತಾನದ್ದಲ್ಲವೇ. ಅದಕ್ಕೇ ಅವರಿಗೆ ಕನ್ನಡದ ಪದಗಳು ತಾತ್ಸಾರ.
4/4— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 28, 2020
ಮುಂದುವರಿದು ನಾನು ಯಾವುದೇ ಸುಳ್ಳು ಹೇಳಿಲ್ಲ, ನಿಂದನಾತ್ಮಕ ಪದವನ್ನು ಬಳಕೆ ಮಾಡಿಲ್ಲ, ಪತ್ರಿಕೆಯಲ್ಲಿ ಬಂದಿದ್ದ ವರದಿಯನ್ನೇ ಓದಿ ಹೇಳಿದ್ದೇನೆ, ಕನ್ನಡ ಭಾಷೆಯ ಬಗ್ಗೆ ಅರಿವಿರದ ಬಿಜೆಪಿಯವರು ಸತ್ಯದ ಮಾತನ್ನು ಗೇಲಿ ಮಾಡಿ, ಉಗ್ರ ಆದಿತ್ಯ ರಾವ್ ಬೆನ್ನಿಗೆ ನಿಂತಿದ್ದಾರೆ. ಇವರು ಧರ್ಮ ವಿರೋಧಿಗಳು.
ನಾನು ಸುಳ್ಳಾಡಿಲ್ಲ, ನಿಂದನಾತ್ಮಕ ಪದ ಬಳಸಿಲ್ಲ. ಪತ್ರಿಕೆಯೊಂದರ ವರದಿ ಓದಿ ಸತ್ಯ ಮಾತಾಡಿದ್ದೇನೆ. ಆದಿತ್ಯ 'ರಾವ್' ಎಂಬ ಉಗ್ರನ ರಕ್ಷಣೆಗೆ ನಿಂತಿರುವ ಬಿಜೆಪಿ ನನ್ನ ಸತ್ಯದ ಮಾತನ್ನೇ ಗೇಲಿ ಮಾಡುತ್ತಿದೆ. ಬಿಜೆಪಿ ಸತ್ಯ, ಧರ್ಮಗಳ ವಿರೋಧಿ.
3/4— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 28, 2020
ನಾನು ಈ ಹಿಂದೆ ಹೇಳಿದಂತೆ ಪಾಕಿಸ್ತಾನ ಹಾಗೂ ನಾಜಿ ಜೀನ್ ಹೊಂದಿರುವ ಬಿಜೆಪಿಯವರಿಗೆ ಕನ್ನಡದ ಮೂಲ ನಿವಾಸಿ ಸಮುದಾಯದ ನಾಯಕರನ್ನು ಕಂಡರೆ ಉರಿ. ಅದಕ್ಕೇ ಈ ಮಣ್ಣಿನ ಮೂಲ ನಿವಾಸಿ ಪ್ರತಿನಿಧಿಯಾಗಿರುವ ನನ್ನನ್ನು ಎದುರಲ್ಲಿ ನಿಂತು ಹೋರಾಡಲಾಗದೇ ಗೇಲಿ ಮೂಲಕ ಹಣಿಯುವ ಪ್ರಯತ್ನ ಮಾಡುತ್ತಿದ್ದಾರೆ.
ನಾನು ಹಿಂದೆಯೇ ಹೇಳಿದಂತೆ, ಪಾಕಿಸ್ತಾನ, ನಾಜಿ ಜೀನ್ ಹೊಂದಿರುವ ಬಿಜೆಪಿಗೆ ಕನ್ನಡದ ಮೂಲ ನಿವಾಸಿ ಸಮುದಾಯದ ನಾಯಕರನ್ನು ಕಂಡರೆ ಉರಿ. ಅದಕ್ಕೇ ಈ ಮಣ್ಣಿನ ಮೂಲ ನಿವಾಸಿ ಸಮುದಾಯದ ಪ್ರತಿನಿಧಿಯಾದ ನನ್ನನ್ನು ಹಣಿಯಲು ಪ್ರಯತ್ನಿಸುತ್ತಿದೆ. ಎದುರಲ್ಲಿ ನಿಂತು ಹೋರಾಡಲಾಗದೇ ಗೇಲಿ ಮೂಲಕ ಹಣಿಯಲು ನಿಂತಿದೆ ಬಿಜೆಪಿ.
2/4— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 28, 2020
ದೇಶದಲ್ಲಿ ಇಂದು ನಡೆಯುತ್ತಿರುವುದು ಕುಟಿಲ ರಾಜಕಾರಣ. ಅದರ ಭಾಗವೇ ಗೇಲಿ, ಕೊಂಕು, ಟ್ರೋಲ್ಗಳು ಎಂದಿದ್ದಾರೆ. ಒಬ್ಬ ನಾಯಕನ ವಿರುದ್ಧ ಎದುರು ನಿಂತು ಹೋರಾಡಲಾಗದ ಹೇಡಿಗಳು ಮಾತ್ರ ಗೇಲಿ, ಅಪಹಾಸ್ಯಗಳಂತಹ ತಂತ್ರಗಳ ಮೂಲಕ ನನ್ನ ಹನನಕ್ಕೆ ನಿಂತಿದ್ದಾರೆ. ಮಿಣಿ ಮಿಣಿ ಎಂಬ ಶಬ್ಧ ಇಟ್ಟುಕೊಂಡು ಬಿಜೆಪಿ ಮಾಡುತ್ತಿರುವುದು ಹೇಡಿಗಳ ಕೆಲಸ
ದೇಶದಲ್ಲಿ ಇಂದು ನಡೆಯುತ್ತಿರುವುದು ಕುಟಿಲ ರಾಜಕಾರಣ. ಅದರ ಭಾಗವೇ ಕೊಂಕು, ಟ್ರೋಲ್ಗಳು. ಒಬ್ಬ ನಾಯಕನ ವಿರುದ್ಧ ಎದುರು ನಿಂತು ಹೋರಾಡಲಾಗದ ಹೇಡಿಗಳು ಗೇಲಿ, ಅಪಹಾಸ್ಯದ ತಂತ್ರದ ಮೂಲಕ ನಾಯಕನ ಹನನಕ್ಕೆ ನಿಲ್ಲುತ್ತಾರೆ. ಮಿಣಿ ಮಿಣಿ ಎಂಬ ಶಬ್ಧ ಇಟ್ಟುಕೊಂಡು ಬಿಜೆಪಿ ಮಾಡುತ್ತಿರುವುದು ಅದೇ ಹೇಡಿಗಳ ಕೆಲಸ.
1/4— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 28, 2020