ದಾವಣಗೆರೆ: ಕೋಳಿ, ಕುರಿ ಮಾಂಸದಲ್ಲಿ‌ ನಾಡಬಾಂಬ್ ಇಟ್ಟು ಸ್ಫೋಟಿಸಿ, ಕಾಡು ಪ್ರಾಣಿ ಬೇಟೆಯಾಡುತ್ತಿದ್ದ ಆರೋಪಿ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅರಣ್ಯ ಪ್ರದೇಶದಲ್ಲಿ ಕೋಳಿ, ಕುರಿ ಮಾಂಸದ ಒಳಗೆ ನಾಡಬಾಂಬ್ ಇಟ್ಟು ಸ್ಫೋಟಗಿಳಿಸಿ, ಕಾಡುಪ್ರಾಣಿ ಬೇಟೆಯಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ‌ ನ್ಯಾಮತಿ ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ನಿವಾಸಿ ಬಸವರಾಜಪ್ಪ (42) ಬಂಧಿತ ಆರೋಪಿ, ಇನ್ನೊಬ್ಬ ಆರೋಪಿ ಅಪ್ಪು (38) ಪರಾರಿಯಾಗಿದ್ದಾನೆ. ದಾಳಿ ವೇಳೆ ಆರೋಪಿ ಬಳಿ ಇದ್ದ 63 ಜೀವಂತ ನಾಡಬಾಂಬ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನ್ಯಾಮತಿ ವ್ಯಾಪ್ತಿಯ ಹರಮಘಟ್ಟ ಅರಣ್ಯ ಪ್ರದೇಶದಲ್ಲಿ ನಾಡಬಾಂಬ್​​ ಕೋಳಿ ಹಾಗೂ ಕುರಿ ಮಾಂಸದಲ್ಲಿ‌ಟ್ಟು ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಪೊಲೀಸರು ಆರೋಪಿ ಬಸವರಾಜಪ್ಪನನ್ನು ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ವಶಪಡಿಸಿಕೊಂಡ ಜೀವಂತ ನಾಡ ಬಾಂಬ್​ಗಳನ್ನು ನಿಷ್ಕ್ರಿಯ ಗೊಳಿಸಲು ಚಿತ್ರದುರ್ಗದ ಸ್ಪೋಟಕ ವಸ್ತು ಸಂಗ್ರಹಾಲಯಕ್ಕೆ ರವಾನೆ ಮಾಡಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *