ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶುಕ್ರವಾರ ಹೆಣ್ಣು ಮಕ್ಕಳನ್ನು ರಕ್ಷಿಸಿ, ಹೆಣ್ಣು ಮಕ್ಕಳನ್ನು ಓದಿಸಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಿ, ಹೆಣ್ಣು ಮಕ್ಕಳ ಮೇಲಿನ ಲಿಂಗ ಮತ್ತು ಶೋಷಣೆ ವಿರುದ್ಧ ಹೋರಾಡಿ ಅಭಿಯಾನದಡಿ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆ ಗಮನ ಸೆಳೆಯಿತು.
ಈ ವೇಳೆ ಭಾರತದ ಭೂಪಟ ಜೊತೆಗೆ ಸಂವಿಧಾನ ಪೀಠಾರಿಕೆಯೂ ಅರಳಿತು.ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯು ಕಾರ್ಯನಿರ್ವಾಹಕ ಅಧಿಕಾರಿ ಸಿಇಒ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ವಸಂತಿ ಉಪ್ಪಾರ್ ಸೇರಿದಂತೆ ಮತ್ತಿತರರು ಇದ್ದರು.



