ದಾವಣಗೆರೆ: ಅಡಿಕೆ ದರದಲ್ಲಿ ಅಸ್ಥಿರತೆ; ಒಂದೆಡೆ ಅಂತರ್ಜಲ, ಮತ್ತೊಂದೆಡೆ ದರ ಕುಸಿತ; ಆತಂಕದಲ್ಲಿ ರೈತ- ಕನಿಷ್ಠ, ಗರಿಷ್ಠ‌ ಬೆಲೆ ಎಷ್ಟಿದೆ…?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ಕಳೆದ ಒಂದು ತಿಂಗಳಿಂದ ಕುಸಿತ ಕಾಣುತ್ತಲೇ ಇದೆ. ಒಂದು ಕಡೆ ತೀವ್ರ ಬರ, ಅಂತರ್ಜಲ ಕುಸಿತ, ಬೋರ್ ವೆಲ್ ಗಳಿಗೆ ಸಮರ್ಪಕ ವಿದ್ಯುತ್ ಸಮಸ್ಯೆ ಕಾಡುತ್ತಿದೆ. ಇದೆಲ್ಲದರ ನಡುವೆ ದರ ಕುಸಿತದಿಂದ ರೈತರರಲ್ಲಿ ಆತಂಕ ಉಂಟು ಮಾಡಿದೆ. ಫೆ.16ರಂದು ಮತ್ತೆ ದರ ಕುಸಿತ ಕಂಡಿದೆ. ಹಿಂದಿನ ದಿನದ ಮಾರುಕಟ್ಟೆಗೆ ಹೋಲಿಕೆ ಮಾಡಿದ್ರೆ 150 ರೂ.ಗಳಷ್ಟು ದರ ಕುಸಿದಿದೆ. ಹೊಸ ವರ್ಷ 2024ರ ಆರಂಭದಿಂದಲೂ ಏರಿಮುಖದಲ್ಲಿದ್ದ ಅಡಿಕೆ ದರ ಜ. 15ರ ನಂತರ ಕುಸಿತ ಆರಂಭವಾಗಿದ್ದು, ಒಂದು ತಿಂಗಳಲ್ಲಿ 2,300 ರೂ.ಗಳಷ್ಟು ಕುಸಿತ ಕಂಡಿದೆ.

ಈಗಾಗಲೇ ಕೊಯ್ಲು ಪೂರ್ಣಗೊಂಡಿದ್ದು, ಹೊಸ ಹೊಂಬಾಳೆ ಶುರುವಾಗಿವೆ. ಆದರೆ, ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಹೇಗಾದ್ರೂ ಈ ಬೇಸಿಗೆ ಕಳೆದರೆ ಸಾಕು ಎನ್ನುವ ಸ್ಥಿತಿ ಇದೆ. ಸದ್ಯ ಮಾರುಕಟ್ಟೆ ಕುಸಿತದಲ್ಲಿದ್ದು, ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ಒಳ್ಳೆ ರೇಟ್ ಸಿಗುವ ಸಾಧ್ಯತೆ ಇದೆ. ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ 57 ಸಾವಿರ ತಲುಪಿತ್ತು. ಫೆ.16 ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 48,299 ರೂ.ಗಳಿದ್ದು, ಕನಿಷ್ಠ ಬೆಲೆ 46,512 ರೂ.ಗಳಾಗಿದೆ.

2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ವರ್ಷದಲ್ಲಿಯೇ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ರೂ.ಗೆ ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 48 ಸಾವಿರ ಗಡಿ ದಾಟಿತ್ತು.ಇದೀಗ 2024 ಜನವರಿ 15ರಂದು ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಿಂದ ಸತತ ಕುಸಿತ ಕಂಡು ಈಗ 48 ಸಾವಿರ ತಲುಪಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಫೆ.16ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 46,512 ರೂ, ಗರಿಷ್ಠ ಬೆಲೆ 48,299 ಹಾಗೂ ಸರಾಸರಿ ಬೆಲೆ 47,598 ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 31,929 ರೂ‌.ಗೆ ಮಾರಾಟವಾಗಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *