ದಾವಣಗೆರೆ: ಭದ್ರಾ ನಾಲೆಯ ಅಕ್ರಮ ಪಂಪ್ ಸೆಟ್ ತೆರವು ಕಾರ್ಯಾಚರಣೆ; ಈ ಪ್ರದೇಶದಲ್ಲಿ ಫೆ.23ರವರೆಗೆ ನಿಷೇಧಾಜ್ಞೆ ಜಾರಿ….!!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭದ್ರಾನಾಲಾ ಕಾಲುವೆಗಳಲ್ಲಿ ಅಳವಡಿಸಿರುವ ಅನಧಿಕೃತ ಪಂಪ್‍ ಸೆಟ್‍ಗಳ ತೆರವು ಕಾರ್ಯಾಚರಣೆ ಸಂಬಂಧ ದಾವಣಗೆರೆ ತಾಲ್ಲೂಕು ಮಾಯಾಕೊಂಡ ಹೋಬಳಿ ನಲ್ಕುಂದ ಬಳಿ ತಾಲ್ಲೂಕು ಗಡಿಯಿಂದ ಶಂಕರನಹಳ್ಳಿ ಗ್ರಾಮ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿ ಡಾ.ಅಶ್ವಥ್.ಎಂ.ಬಿ ಆದೇಶಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ತೋಟದ ಬೆಳೆಗಳು ಮತ್ತು ಕುಡಿಯುವ ನೀರಿನ ಉದ್ದೇಶದಿಂದ ಫೆ. 16 ರಿಂದ ಭದ್ರಾ ಅಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ. ಪ್ರಸ್ತುತ ರಾಜ್ಯ ಮತ್ತು ಜಿಲ್ಲೆಯಲ್ಲಿ ಭೀಕರ ಬರಗಾಲವಿದ್ದು ಕುಡಿಯುವ ನೀರಿಗೆ ತುಂಬಾ ಬೇಡಿಕೆ ಇದ್ದು ಭದ್ರಾಕಾಲುವೆ ಯಿಂದ ದಾವಣಗೆರೆಸೇರಿದಂತೆ ಅನೇಕ ಗ್ರಾಮಗಳಿಗೆ ಕುಡಿಯುವ ನೀರು ನೀಡಲಾಗುತ್ತದೆ.

ಜಿಲ್ಲೆಯಲ್ಲಿ ಬರಗಾಲವಿರುವುದರಿಂದ ಅನಧಿಕೃತ ಪಂಪ್‍ಸೆಟ್‍ಗಳನ್ನು ತೆರವು ಕಾರ್ಯಾಚರಣೆ ಸಮಯದಲ್ಲಿ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸುವ ಮತ್ತು ಗಲಭೆಗಳಾಗುವ ಸಂಭವಿರುವುದರಿಂದ ದಾವಣಗೆರೆ ಶಾಖಾ ಕಾಲುವೆ 34 ಕಿ.ಮೀ.ರಿಂದ 42 ಕಿ.ಮೀ ರವರೆಗೆ ಅಂದರೆ ಎಕ್ಕೆಗೊಂದಿ ಗ್ರಾಮದಿಂದ ಅಥವಾ ನಲ್ಕುಂದ ಬಳಿ ತಾಲ್ಲೂಕು ಗಡಿಯಿಂದ ಶಂಕರನಹಳ್ಳಿ ಗ್ರಾಮದವರೆಗೆ ನಿಷೇಧಿತ ಪ್ರದೇಶವಾಗಿದೆ.

ಫೆ 19 ರಿಂದ ಫೆ.23 ರವರೆಗೆ ‘ದಾವಣಗೆರೆ ತಾಲ್ಲೂಕು ಮಾಯಾಕೊಂಡ ಹೋಬಳಿ ನಲ್ಕುಂದ ಬಳಿ ತಾಲ್ಲೂರು ಗಡಿಯಿಂದ ಶಂಕರನಹಳ್ಳಿ “ಗ್ರಾಮ ವ್ಯಾಪ್ತಿಯಲ್ಲಿ ಬರುವ ಭದ್ರಾ ಕಾಲುವೆಗಳ ಸುತ್ತಮುತ್ತ ಕಾಲುವೆಯಿಂದ ಬಲ ಮತ್ತು ಎಡಭಾಗದಿಂದ 200 ಮೀ ರವರೆಗಿನ ಪ್ರದೇಶದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿಯಿರುವ 4 ಕ್ಕಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸಿದೆ.

ಈ ಸಮಯದಲ್ಲಿ ಶಸ್ತ್ರ, ಬಡಿಗೆ,ಬರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಟಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದಂತಹ ಯಾವುದೇ ಮಾರಶಸ್ತ್ರಗಳನ್ನು ತೆಗೆದುಕೊಂಡು ಹೋಗುವುದು, ತಿರುಗಾಡುವುದು, ಕಲ್ಲು, ಸ್ಫೋಟಕ ವಸ್ತುಗಳು, ತೆಗೆದುಕೊಂಡು ಹೋಗುವುದು ನಿಷೇಧಿಸಿದೆ. ಬಹಿರಂಗವಾಗಿ ಘೋಷಣೆಗಳನ್ನು ಕೂಗುವುದು. ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಮಾಡುವುದು, ನನ್ನ ಅಥವಾ ನಕಲಿ ಪ್ರದರ್ಶನಗಳನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಿಲಾಗಿದೆ ಎಂದು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *