Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಿಳಾ ನಿಲಯದ ದಿವ್ಯ ಮದುವೆಗೆ ಬೀಗರಾದ ಅಧಿಕಾರಿಗಳು; ಮಂತ್ರ ಮಾಂಗಲ್ಯ ಮೂಲಕ ಸರಳ ವಿವಾಹ…!!

IMG 20240221 193405

ಪ್ರಮುಖ ಸುದ್ದಿ

ದಾವಣಗೆರೆ: ಮಹಿಳಾ ನಿಲಯದ ದಿವ್ಯ ಮದುವೆಗೆ ಬೀಗರಾದ ಅಧಿಕಾರಿಗಳು; ಮಂತ್ರ ಮಾಂಗಲ್ಯ ಮೂಲಕ ಸರಳ ವಿವಾಹ…!!

ದಾವಣಗೆರೆ: ರಾಷ್ಟ್ರಕವಿ ಕುವೆಂಪು ಅವರ ಮಂತ್ರ ಮಾಂಗಲ್ಯ ಧಾರಣೆಯಂತೆ ಮಹಿಳಾ ನಿಲಯದ ದಿವ್ಯ ಎಂ, ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಗ್ರಾಮದ ನಾಗರಾಜ ಮದುವೆ ದಾವಣಗೆರೆ ರಾಮನಗರದ ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಿತು.

ಅತ್ಯಂತ ಸರಳ, ಕ್ರಮಬದ್ದವಾಗಿ ಮದುವೆ ನಡೆದ‌‌ ಮದುವೆಗೆ ಅಧಿಕಾರಿಗಳು ಬೀಗರಾಗಿದ್ದರು. ಎಲ್ಲಾ ಮದುವೆ ಶಾಸ್ತ್ರಗಳನ್ನು ಪೂರೈಸಿ ನವ ದಂಪತಿಗಳಿಗೆ ಶುಭ ಹಾರೈಸಿದರು.ನೂತನ ದಂಪತಿಗಳಿಗೆ ಶುಭ ಹಾರೈಸಿದ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ. ಮಾತಾನಾಡಿ, ಕುವೆಂಪು ಹಾಕಿ ಕೊಟ್ಟಿರುವ ಮಂತ್ರ ಮಾಂಗಲ್ಯದಲ್ಲಿ ಇಬ್ಬರು ನವ ದಂಪತಿಗಳು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆ ಬಹಳ ವಿಶೇಷವಾಗಿ ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ವಧು ಕಡೆಯಿಂದ ನಮ್ಮ ಅಧಿಕಾರಿಗಳು ಬಂಧುಗಳಾಗಿ ಕೆಲಸ ನಿರ್ವಹಿಸಿದ್ದಾರೆ. ವರನ ಕಡೆಯಿಂದ ಅವರ ಅಕ್ಕ, ಮಾವಂದಿರು ಭಾಗವಹಿಸಿ ಈ ಮದುವೆಗೆ ಸಾಕ್ಷೀಕರಿಸಿದ್ದಾರೆ. ಇವರು ನವದಂಪತಿಗಳಿಗೆ ಸಂವಿಧಾನ ಪ್ರಸ್ತಾವನೆಯುಳ್ಳ ಪೋಟೋ ಪ್ರೇಮ್ ನೀಡುವ ಮೂಲಕ ಶುಭ ಹಾರೈಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು.ಎಸ್.ಬಳ್ಳಾರಿ, ಉಪವಿಭಾಗಾಧಿಕಾರಿ ದುರ್ಗಶ್ರೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ಹಾಗೂ ಇನ್ನಿತರೆ ಅಧಿಕಾರಿಗಳು ಆಗಮಿಸಿ ವಧುವರರಿಗೆ ಶುಭ ಕೋರಿದರು.

ರಾಜ್ಯ ಮಹಿಳಾ ನಿಲಯದಲ್ಲಿ ಕಳೆದ 5 ವರ್ಷಗಳ ಕಾಲ ಆಶ್ರಯ ಪಡೆದ ದಿವ್ಯ.ಎಂ (24 ವರ್ಷ} ಮತ್ತು ನಾಗರಾಜ ಎಂಬುವರ ಜೊತೆ ವಿಶೇಷ ರೀತಿಯಲ್ಲಿ ಸಾಂಪ್ರದಾಯವನ್ನು ಕೈಬಿಟ್ಟು, ಪುರೋಹಿತರನ್ನು ಕರೆಸದೇ ಸರಳ ವಿಧಾನದಲ್ಲಿ ವಿವಾಹ ಮಹೋತ್ಸವವನ್ನು ನೆರವೇರಿಸಲಾಯಿತು.

ಚಿತ್ರದುರ್ಗ ತಾ; ಮುದ್ದಾಪುರ ಗ್ರಾಮದ ನಿವಾಸಿ ನಾಗರಾಜ್.ಟಿ. ತಂದೆ ದಿವಂಗತ.ತಿಮ್ಮಣ್ಣ ವ್ಯವಸಾಯ ವೃತ್ತಿ ಮಾಡುತ್ತಾರೆ. ಆರ್ಥಿಕವಾಗಿ ಸದೃಡವಾಗಿರುತ್ತಾರೆ. ಇವರಿಗೆ ತಂದೆ, ತಾಯಿ ಇಬ್ಬರೂ ಸಹ ಇರುವುದಿಲ್ಲ. ಅಜ್ಜನ ಜೊತೆ ವಾಸವಿದ್ದಾರೆ.ಕಚೇರಿಯ ಸೂಪರ್‍ಡೆಂಟ್ ಮಲ್ಲಿಕಾರ್ಜುನ್, ರಾಜ್ಯ ಮಹಿಳಾ ನಿಲಯ ಅಧೀಕ್ಷಕರಾದ ಶಕುಂತಲಾ ಬಿ ಕೋಳೂರ ಉಪಸ್ಥಿತರಿದ್ದರು.ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರತಿಜ್ಞೆ ಸ್ವೀಕರಿಸಲಾಯಿತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top