ಅದ್ಧೂರಿಯಾಗಿ ಜರುಗಿದ ಹರಿಹರೇಶ್ವರ ಬ್ರಹ್ಮರಥೋತ್ಸವ; ಹರಿದು ಬಂದ ಭಕ್ತ ಸಾಗರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹರಿಹರದ ಹರಿಹರೇಶ್ವರ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ಜರುಗಿತು. ಭರತ ಹುಣ್ಣಿಮೆಯ ಮೇಷ ಲಗ್ನದಲ್ಲಿ ಬೆಳಿಗ್ಗೆ 11.45ಕ್ಕೆ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.ಬ್ರಹ್ಮರಥೋತ್ಸವಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು.

ಹರಿಹರ ಪಟ್ಟಣದ ರಥಬೀದಿಯಲ್ಲಿ ಎರಡು ಗಂಟೆಗಳ ಕಾಲ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ತಿರಿಸಿದರು. ಏಳು ದಿನಗಳ ಕಾಲ ಹೋಮ ಹವನ, ಮಹಾರುದ್ರಾಭಿಷೇಕ ಜೊತೆಗೆ ಪೂರ್ಣಾಹುತಿ ನಡೆಯುತ್ತದೆ. ಆರನೇ ದಿನಕ್ಕೆ ರಥೋತ್ಸವ ನಡೆಯಿತು.

ಶಿವ ಮತ್ತು ವಿಷ್ಣು ಒಂದೇ ಮೂರ್ತಿಯಲ್ಲಿರುವುದು ಈ ಪುಣ್ಯಕ್ಷೇತ್ರದ ವಿಶೇಷ. ಹರಿಹರೇಶ್ವನ ಅರ್ಧ‌ ಮುಖ ಹರಿ (ವಿಷ್ಣು) ಇನ್ನರ್ಧ ಮುಖ ಹರ (ಶಿವ) ಕಾಣಬಹುದು. ಬ್ರಹ್ಮರಥೋತ್ಸವವು ಅಪಾರ ಭಕ್ತ ಸಾಗರ ನಡುವೆ ಸಮಯಕ್ಕೆ ಸರಿಯಾಗಿ ಅದ್ಧೂರಿಯಾಗಿ ನಡೆಯಿತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *