Connect with us

Dvgsuddi Kannada | online news portal | Kannada news online

ದಾವಣಗೆರೆ: ಬೋರ್ ವೆಲ್ ಕೊರೆಯುವಾಗ ಅವಘಡ; ನೋಡುತ್ತಾ ನಿಂತಿದ್ದ ವ್ಯಕ್ತಿ ಮೇಲೆ ಸಿಡಿದ ಪೈಪ್; ವ್ಯಕ್ತಿ ಸಾವು

IMG 20240225 111920

ದಾವಣಗೆರೆ

ದಾವಣಗೆರೆ: ಬೋರ್ ವೆಲ್ ಕೊರೆಯುವಾಗ ಅವಘಡ; ನೋಡುತ್ತಾ ನಿಂತಿದ್ದ ವ್ಯಕ್ತಿ ಮೇಲೆ ಸಿಡಿದ ಪೈಪ್; ವ್ಯಕ್ತಿ ಸಾವು

ದಾವಣಗೆರೆ: ಅಡಿಕೆ ಬೆಳೆ ಉಳಿಸಿಕೊಳ್ಳಲು ಜಿಲ್ಲೆಯಲ್ಲಿ ಬೋರ್‌ ವೆಲ್ ಕೊರೆಸುವವರ ಪ್ರಮಾಣ ಹೆಚ್ಚಾಗಿದೆ. ಹೀಗೆ ಬೋರ್ ಕೊರೆಯುವುದನ್ನು ನೋಡುತ್ತಾ ನಿಂತಿದ್ದ ವ್ಯಕ್ತಿ‌‌ ಮೇಲೆ ಪೈಪ್‌ ಸಿಡಿದು ಬಿದ್ದ‌ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಗ್ರಾಮದ ಜಮೀನೊಂದರಲ್ಲಿ ಈ ಘಟನೆ ನಡೆದಿದೆ. ತಿಮ್ಮಪ್ಪ (53) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಬೋರ್ ಲಾರಿಯ ಆಪರೇಟರ್‌ ಪೈಪ್‌ ಬದಲಿಸುವಾಗ ಸರಿಯಾಗಿ ಪೈಪ್‌ ಜೋಡಣೆ ಮಾಡದೆ ನಿರ್ಲಕ್ಷ್ಯ ತೋರಿದ್ದರಿಂದ ಪೈಪ್‌ ಬೋರ್‌ ಗಾಡಿಯಿಂದ ಸಿಡಿದು ಅಲ್ಲೇ ನಿಂತಿದ್ದ ತಿಮ್ಮಪ್ಪನ ಮೇಲೆ ಬಿದ್ದಿದೆ‌ ಎಂದು ಮೃತರ ಪತ್ನಿ ಮಂಜಮ್ಮ ದೂರು ನೀಡಿದ್ದಾರೆ. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದ್ದು,  ತೀವ್ರ ಮಳೆ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿದಿದೆ. ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುತ್ತಿದ್ದು, ಬೀರ್ ವೆಲ್ ಮೊರೆ ಹೋಗಿದ್ದಾರೆ. ಸಾವಿರ ಅಡಿ ಆಳ ಕೊರೆದರೂ ಒಂದು ಹನಿ ನೀರು ಬೀಳುತ್ತಿಲ್ಲ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top