ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿಯಡಿ ವಿದ್ಯಾರ್ಥಿವೇತನ ಪಡೆಯಲು ಆದಾಯ ಪ್ರಮಾಣ ಪತ್ರವನ್ನು ಆನ್ ಲೈನ್ ಮೂಲಕ ಫೆಬ್ರವರಿ 29 ರೊಳಾಗಾಗಿ ಸಲ್ಲಿಸಲು ಜಂಟಿ ಕೃಷಿ ನಿರ್ದೇಶಕರಾದ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ. (ಎಸ್ಎಸ್ಪಿ) ವಿದ್ಯಾರ್ಥಿಗಳ ಲಾಗಿನ್ನಲ್ಲಿ ಅವಕಾಶ ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ.2.5ಲಕ್ಷ ಮೀರಿರಬಾರದು. ಪೋಷಕರ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಎಸ್.ಎಸ್.ಪಿ ವಿದ್ಯಾರ್ಥಿಗಳ ಲಾಗಿನ್ ನಲ್ಲಿ ಫೆ.29 ರೊಳಗೆ ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಪಡೆದು ಅಪ್ಲೋಡ್ ಮಾಡಬಹುದೆಂದು ಅವರು ತಿಳಿಸಿದ್ದಾರೆ.



