Connect with us

Dvgsuddi Kannada | online news portal | Kannada news online

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ; 7ನೇ ವೇತನ ಆಯೋಗ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

IMG 20240227 201554

ಪ್ರಮುಖ ಸುದ್ದಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ; 7ನೇ ವೇತನ ಆಯೋಗ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರು: ಗ್ಯಾರಂಟಿ ಯೋಜನೆಯ ಆರ್ಥಿಕ ಹೊರೆಯ ನಡುವೆಯೂ ರಾಜ್ಯ ಸರ್ಕಾರಿ ನೌಕರರ 7ನೇ ವೇತನ ಆಯೋಗದ ಅಂತಿಮ ವರದಿ ಬಂದ‌ ಕೂಡಲೇ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ನಾನು ಸರ್ಕಾರಿ ನೌಕರರ ಪರಸರ್ಕಾರಿ ನೌಕರರ ಸಮಸ್ಯೆಗಳನ್ನು ಅರಿತು 7ನೇ ವೇತನ ಆಯೋಗ ರಚಿಸಲಾಗಿದ್ದು, 6ನೇ ವೇತನ ಆಯೋಗವನ್ನು ನಮ್ಮ ಸರ್ಕಾರ ಜಾರಿಗೆ ತಂದಿತ್ತು. 7 ನೇ ವೇತನ ಆಯೋಗದ ಮಧ್ಯಂತರ ವರದಿಯಂತೆ 17% ಹೆಚ್ಚಳ ಮಾಡಲಾಗಿತ್ತು. ಆಯೋಗದ ಅಂತಿಮ ವರದಿ ನೀಡಲು ಇನ್ನಷ್ಟು ಕಾಲಾವಕಾಶ ಬೇಕೆಂದು ಆಯೋಗದ ಆಧ್ಯಕ್ಷರು ಕೋರಿದ್ದು, ಮಾರ್ಚ್ 15 ರವರೆಗೆ ವರದಿ ನೀಡಲು ಸಮಯಾವಕಾಶ ನೀಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನಲೆ , ಆಯೋಗದ ಅಂತಿಮ ವರದಿಯನ್ನು ಆದಷ್ಟು ಬೇಗ ಸಲ್ಲಿಸುವುದಾಗಿ ತಿಳಿಸಿದ್ದಾರೆ. ನಾನು ಸರ್ಕಾರಿ ನೌಕರರ ಪರವಾಗಿದ್ದೇನೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ 7.50 ಲಕ್ಷ ಮಂಜೂರಾಗಿರುವ ಹುದ್ದೆಗಳಿವೆ. 7 ಲಕ್ಷ ಜನ 7 ಕೋಟಿ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗುವ, ರಾಜ್ಯದ ಅಭಿವೃದ್ಧಿಯಲ್ಲಿ ಬಾಗಿಯಾಗುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು. ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ ಎಂದರು.

ಎನ್ ಪಿ ಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆಯೂ ಶೀಘ್ರದಲ್ಲಿ ತೀರ್ಮಾನಿಸಲಾಗುವುದು ಎಂದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

davangere lokayukta 2
Morarji Desai school 1
davangere lokayukta visit 1
lokayukta visit
grama Panchayti 1
Advertisement
Advertisement Enter ad code here

Title

To Top