Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಸಲ್ಲಿಸಿದ ವಸತಿ ರಹಿತರ ಬಡ ಕುಟುಂಬಗಳ ಸಮೀಕ್ಷೆ ; ಸರ್ವೇ ವೇಳೆ ಈ ದಾಖಲೆ ಅಗತ್ಯ…!!!

IMG 20240311 193250

ಪ್ರಮುಖ ಸುದ್ದಿ

ದಾವಣಗೆರೆ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಸಲ್ಲಿಸಿದ ವಸತಿ ರಹಿತರ ಬಡ ಕುಟುಂಬಗಳ ಸಮೀಕ್ಷೆ ; ಸರ್ವೇ ವೇಳೆ ಈ ದಾಖಲೆ ಅಗತ್ಯ…!!!

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯ ನಿವೇಶನ, ವಸತಿ ರಹಿತ ಬಡಜನರಿಗೆ ಹೌಸಿಂಗ್ ಫಾರ್ ಆಲ್ 2022 ರ ಯೋಜನೆಯಡಿ ವಸತಿ ಸೌಲಭ್ಯಕ್ಕಾಗಿ ನಿವೇಶನ, ವಸತಿ ರಹಿತ ಬಡಜನರು 2015 ರಿಂದ 2024 ರವರೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಆನ್‍ಲೈನ್ ತಂತ್ರಾಂಶದಲ್ಲಿ ವಿವಿಧ ವಾರ್ಡ್‍ಗಳಿಂದ ಬೇಡಿಕೆ ಸಮೀಕ್ಷೆ ಸರ್ವೇ ಪ್ರಕಾರ 29379 ನಿವೇಶನ, ವಸತಿ ರಹಿತರು ಅರ್ಜಿಗಳನ್ನು ಸಲ್ಲಿಸಿರುತ್ತಾರೆ.

ಈ ವಸತಿ, ನಿವೇಶನ ರಹಿತ ಅರ್ಜಿಗಳನ್ನು ಭೌತಿಕವಾಗಿ ಪರಿಶೀಲಿಸಲು ಅರ್ಜಿದಾರರು ವಾಸ ಮಾಡುವ ಸ್ಥಳಗಳಿಗೆ ಪಾಲಿಕೆ ಕಂದಾಯ ಶಾಖೆ, ವಸತಿ ಶಾಖೆಯ ನೌಕರರು, ಅಧಿಕಾರಿಗಳು ಭೇಟಿ ನೀಡಿದಾಗ ಅರ್ಜಿದಾರರು ತಮ್ಮ ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ನಕಲು ಪ್ರತಿಗಳನ್ನು ಹಾಗೂ ಇತರೆ ದಾಖಲೆಗಳನ್ನು ನೀಡಿ ಸರ್ವೇ ಕಾರ್ಯಕ್ಕೆ ಸಹಕಾರ ನೀಡಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top