ಬಿಜೆಪಿ ಎರಡನೇ ಪಟ್ಟಿ ಪ್ರಕಟ; ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ; ದಾವಣಗೆರೆ ಗಾಯತ್ರಿ ಸಿದ್ದೇಶ್ವರಗೆ ಟಿಕೆಟ್..

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಇಂದು (ಮಾ.13) ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್‌ ಘೋಷಣೆ ಮಾಡಿದೆ. ದಾವಣಗೆರೆ ಹಾಲಿ ಸಂಸದ ಜಿ‌ಎಂ ಸಿದ್ದೇಶ್ವರ್ ಗೆ ಟಿಕೆಟ್ ಮಿಸ್ ಆಗಿದ್ದು, ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಟಿಕೆಟ್ ನೀಡಲಾಗಿದೆ.

ರಾಜ್ಯದ ಹಾಲಿ ಸಂಸದರಾಗಿದ್ದ 9 ಮಂದಿಗೆ ಟಿಕೆಟ್‌ ನೀಡಲಾಗಿಲ್ಲ. ನಳಿನ್ ಕುಮಾರ್‌ ಕಟೀಲ್‌ಗೆ ದಕ್ಷಿಣ ಕನ್ನಡ, ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್‌ ಸಿಂಹ, ಕೊಪ್ಪಳದಿಂದ ಕರಡಿ ಸಂಗಣ್ಣ, ಬೆಂಗಳೂರು ಉತ್ತರದಿಂದ ಸದಾನಂದ ಗೌಡ, ಬಳ್ಳಾರಿಯಲ್ಲಿ ದೇವೇಂದ್ರಪ್ಪ ಅವರಿಗೆ ಟಿಕೆಟ್‌ ನಿರಾಕರಿಸಲಾಗಿದ್ದರೆ, ಚಾಮರಾಜನಗರದಲ್ಲಿ ಶ್ರೀನಿವಾಸ್‌ ಪ್ರಸಾದ್‌, ಹಾವೇರಿಯಲ್ಲಿ ಸಿಎಂ ಉದಾಸಿ, ತುಮಕೂರಿನಲ್ಲಿ ಜಿಎಸ್‌ ಬಸವರಾಜ್‌ ಹಾಗೂ ದಾವಣಗೆರೆಯಲ್ಲಿ ಜಿಎಂ ಸಿದ್ಧೇಶ್ವರ ನಿವೃತ್ತಿ ಘೋಷಣೆ ಮಾಡಿರುವ ಕಾರಣ ಬೇರೆಯವರಿಗೆ ಟಿಕೆಟ್‌ ನೀಡಲಾಗಿದೆ.

ಜಿಲ್ಲಾವಾರುವ ಟಿಕೆಟ್ ವಿವರ

  1. ಬಿಜಾಪುರ- ರಮೇಶ್ ಜಿಗಜಿಣಗಿ
  2. ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
  3. ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
  4. ಕಲಬುರಗಿ- ಉಮೇಶ್ ಜಾಧವ್
  5. ಬೀದರ್- ಭಗವಂತ ಖೂಬಾ
  6. ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
  7. ಬಳ್ಳಾರಿ- ಶ್ರೀರಾಮುಲು
  8. ಹಾವೇರಿ- ಬಸವರಾಜ ಬೊಮ್ಮಾಯಿ
  9. ಧಾರವಾಡ- ಪ್ರಹ್ಲಾದ್ ಜೋಶಿ
  10. ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
  11. ಶಿವಮೊಗ್ಗ- ಬಿ.ವೈ. ರಾಘವೇಂದ್ರ
  12. ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
  13. ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
  14. ತುಮಕೂರು – ವಿ. ಸೋಮಣ್ಣ
  15. ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
  16. ಚಾಮರಾಜನಗರ- ಎಸ್. ಬಸವರಾಜು
  17. ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
  18. ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
  19. ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
  20. ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *