ದಾವಣಗೆರೆ: ಮಟ್ಕಾ ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ ಮಾಡಿದ್ದು, ದಾಳಿ ವೇಳೆ 1.29 ಲಕ್ಷ , ಆರೋಪಿ ವಶಕ್ಕೆ ಪಡೆಯಲಾಗಿದೆ.
ಹರಿಹರ ಬೈಪಾಸ್ ಹತ್ತಿರದ ಎಲೆ ಪೆಂಡಿ ಮಾರ್ಕೆಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಇಸ್ಫೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಪೊಲೀಸ್ ಅಧೀಕ್ಷಕರಿಗೆ ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ನಡೆದಿದೆ.
ಜಿಲ್ಲಾ ಪೊಲೀಸ್ ಕಛೇರಿಯ ಡಿ.ಸಿ.ಆರ್.ಬಿ ತಂಡ ಹಾಗೂ ಹರಿಹರ ಗ್ರಾಮಾಂತರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಿ ದಾಳಿಗೆ ಸೂಚನೆ ನೀಡಿದ್ದು, ಅದರಂತೆ ಸದರಿ ತಂಡವು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮೇಲ್ಕಂಡ ಸ್ಥಳಕ್ಕೆ ದಾಳಿ ಮಾಡಿ, ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಸುನೀಲ್, 44 ವರ್ಷ , ಹಾವೇರಿ ಜಿಲ್ಲೆ ಈತನನ್ನು ಹಿಡಿದು, ಆರೋಪಿತನಿಂದ ಮಟ್ಕಾ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 1,29,500/- ರೂಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿತನ ವಿರುದ್ಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೇಲ್ಕಂಡ ದಾಳಿಯಲ್ಲಿ ಭಾಗವಹಿಸಿದ ಹರಿಹರ ಗ್ರಾಮಂತರ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ ಕುಪ್ಪೆಲೂರು ರವರು ಹಾಗೂ ಠಾಣೆಯ ಸಿಬ್ಬಂದಿಗಳು ಮತ್ತು ಡಿಸಿಆರ್ ಬಿ ಸಿಬ್ಬಂದಿಗಳಾದ ಮಜೀದ್ ಕೆ.ಸಿ, ರಮೇಶ್ ನಾಯ್ಕ್, ರಾಘವೇಂದ್ರ, ಬಾಲಾಜಿ, ಆಂಜನೇಯ ರವರುಗಳನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಪ್ರಶಂಸಿಸಿದ್ದಾರೆ.



