Connect with us

Dvgsuddi Kannada | online news portal | Kannada news online

ದಾವಣಗೆರೆ: ಬಿಜೆಪಿಯಲ್ಲಿ ಬಣ ರಾಜಕೀಯ; ಈ‌ ಬಾರಿ ಎರಡು ಬಣ ಸೇರಿ ಬಿಜೆಪಿ ಗೆಲ್ಲಿಸಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ; ಶಿವಗಂಗಾ ಬಸವರಾಜ್ ಸವಾಲ್

IMG 20240322 144025

ದಾವಣಗೆರೆ

ದಾವಣಗೆರೆ: ಬಿಜೆಪಿಯಲ್ಲಿ ಬಣ ರಾಜಕೀಯ; ಈ‌ ಬಾರಿ ಎರಡು ಬಣ ಸೇರಿ ಬಿಜೆಪಿ ಗೆಲ್ಲಿಸಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ; ಶಿವಗಂಗಾ ಬಸವರಾಜ್ ಸವಾಲ್

ದಾವಣಗೆರೆ: ಬಿಜೆಪಿ ಪಕ್ಷದಲ್ಲಿ ಎರಡು ಬಣ ರಾಜಕೀಯ ಶುರುವಾಗಿದೆ. ತಾಕತ್ ಇದ್ರೆ ಎರಡು ಬಣ ಒಟ್ಟಾಗಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿಕೊಂಡು ಬಂದ್ರೆ ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದುಚನ್ನಗಿರಿ ಕೈ ಶಾಸಕ ಶಿವಗಂಗಾ ಬಸವರಾಜ್ ಸವಾಲ್ ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಬಿಜೆಪಿ ಟಿಕೆಟ್ ಸಂಸದ ಸಿದ್ದೇಶ್ವರ ಪತ್ನಿ ಗಾಯತ್ರಿ‌ ಸಿದ್ದೇಶ್ವರಗೆ ನೀಡಿದ್ದಾರೆ. ಇದರ ವಿರುದ್ಧ ರೇಣುಕಾಚಾರ್ಯ ಟೀಂ ಬಂಡಾಯವೆದ್ದಿದೆ. ಇಬ್ಬರು ಒಟ್ಟಾಗಿ ತಾಕತ್ ಇದ್ರೆ ಈ ಭಾರಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿಕೊಂಡು ಬರಲಿ. ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ಒಂದು ಕತ್ತೆ ನಿಂತ್ರೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುತ್ತೇವೆ. ಬಿಜೆಪಿಯವರು ಬೇಕು ಅಂತಲೇ ಈ ರೀತಿ ಟೀಂ ಮಾಡಿಕೊಂಡಿದ್ದಾರೆ. ಬಿಜೆಪಿ ಸೋತರೆ ಒಗ್ಗಟ್ಟಿಲ್ಲದ್ದರಿಂದ ಸೋಲಾಯಿತು ಅಂತ ಹೇಳೋಕೆ ಕಾರಣ ಬೇಕು. ಅದಕ್ಕಾಗಿ ಹೀಗೆ ಟೀಂ ಮಾಡಿಕೊಂಡು ಓಡಾಡುತ್ತಿದ್ದಾರೆ. ಅವರಿಗೆ ಮೊದಲು ತಾಕತ್ ಇದ್ರೆ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲಿ ಎಂದರು.

ಇನ್ನೂ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದ ವಿಚಾರವಾಗಿ ಮಾತನಾಡಿ, ಗೆಲ್ಲುವ ಅಭ್ಯರ್ಥಿ ಎಂದು ಪರಿಗಣಿಸಿ ಟಿಕೆಟ್ ನೀಡಿದ್ದಾರೆ. ಈ ಬಾರಿ ಮೋದಿಯ ದುರಾಡಳಿತ ಪರಿಣಾಮ ಬೀರುತ್ತದೆ. ಬಿಜೆಪಿಯವರ ಆಟ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top