ದಾವಣಗೆರೆ: ಜಿಲ್ಲೆಯಾದ್ಯಂತ ಸಂಭ್ರಮದಿಂದ ಕಾಮದಹನ ಮತ್ತು ಹೋಳಿ ಹಬ್ಬ ಆಚರಣೆ ನಡೆಯಲಿದೆ. ನಗರದ ರಾಂ ಅಂಡ್ ಕೋ ಸರ್ಕಲ್ ನಲ್ಲಿ ಇದೇ ಮಾ.24 ಭಾನುವಾರದಂದು 25ನೇ ವರ್ಷದ ಬೃಹತ್ ಹೋಳಿ ಹಬ್ಬ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಾ.25 ರಂದು ಎಸ್.ಎಸ್.ಎಲ್.ಸಿ. ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಒಂದು ದಿನ ಮುಂಚಿತವಾಗಿ ರಾಂ ಅಂಡ್ ಕೋ ಸರ್ಕಲ್ ನಲ್ಲಿ ಹೋಳಿ, ಹಬ್ಬ ಆಚರಣೆ ಮಾಡಲು ತೀರ್ಮಾನಿಸಲಾಗಿದೆ.ಆದ್ದರಿಂದ ಸಾರ್ವಜನಿಕರು ಯಾವುದೇ ಊಹಾ ಪೋಹಕ್ಕೆ ಕಿವಿಗೊಡದೆ ಮಾ.24 ಭಾನುವಾರ ದಂದು ರಾಂ ಅಂಡ್ ಕೋ ವೃತ್ತದಲ್ಲಿ ವಿಜೃಂಭಣೆಯ ಹೋಳಿ ಆಚರಣೆಯಲ್ಲಿ ಭಾಗವಹಿಸಿ ಯಶ್ವಸ್ವಿಗೊಳಿಸಬೇಕಾಗಿ ಸಾರ್ವಜನಿಕ ಹಿಂದೂ ಮಹಾಗಣಪತಿ ಟ್ರಸ್ಟ್ ಅಧ್ಯಕ್ಷ ಜೊಳ್ಳಿ ಗುರು ತಿಳಿಸಿದ್ದಾರೆ.
- ಸಾರ್ವಜನಿಕರು ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಪೊಲೀಸ್ ಇಲಾಖೆ ಕೆಳಕಂಡ ಸೂಚನೆಗಳನ್ನು ಪಾಲಿಸಲು ಸೂಚಿಸಿದೆ.
- ಯಾವುದೇ ವ್ಯಕ್ತಿಗಳ ಮೇಲೆ ಒತ್ತಾಯ ಪೂರ್ವಕವಾಗಿ ಬಣ್ಣ ಎರಚುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು
- ಪಿಯುಸಿ ಪರೀಕ್ಷೆಗಳು ಹಾಗೂ ಇತರೆ ಪರೀಕ್ಷೆಗಳು ನಡೆಯುತ್ತಿರುವುದರಿಂದ ಪರೀಕ್ಷೆಗೆ ಹಾಜರಾಗುವಂತಹ ವಿದ್ಯಾರ್ಥಿಗಳಿಗೆ ಯಾವುದೇ ಬಣ್ಣ ಎರಚಬಾರದು, ಯಾರಾದರೂ ಕಿಡಿಗೇಡಿತನಕ್ಕೆ ಮುಂದಾದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು
- ಪೇಂಟ್, ವಾರ್ನಿಷ್, ಆಸಿಡ್, ಡಾಂಬರ್, ಗಾಣದ ಎಣ್ಣೆ, ಮೊಟ್ಟೆ ಹಾಗೂ ಯಾವುದೇ ಅಪಾಯಕಾರಿ ರಾಸಾಯನಿಕ ಮಿಶ್ರಣಗಳನ್ನು ಮೈಮೇಲೆ ಎರಚುವವರ ವಿರುದ್ಧ ಮತ್ತು ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರ ಮತ್ತು ನೌಕರರು ಹಾಗೂ ಶಾಲಾ ವಿದ್ಯಾರ್ಥಿಗಳ ಮೇಲೆ ಬಣ್ಣ ಎರಚುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು
- ಸಾರ್ವಜನಿಕ ನೀರು ಸರಬರಾಜು ಸ್ಥಳಗಳಲ್ಲಿ ಬಣ್ಣ ತೊಳೆದು ನೀರನ್ನು ಮಾಲಿನ್ಯ ಮಾಡಬಾರದು.
- ಹೋಳಿ ಹಬ್ಬದ ನೆಪದಲ್ಲಿ ಸಾರ್ವಜನಿಕರಿಂದ ಒತ್ತಾಯ ಪೂರ್ವಕವಾಗಿ ಹಣ ವಸೂಲಿ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
- ವಿಶೇಷವಾಗಿ ಮೆಡಿಕಲ್ ಮತ್ತು ಇಂಜಿನಿಯರ್ ವಿದ್ಯಾರ್ಥಿಗಳು ಒಂದು ವಿದ್ಯಾರ್ಥಿ ನಿಲಯದಿಂದ ಇನ್ನೊಂದು ವಿದ್ಯಾರ್ಥಿ ನಿಲಯಕ್ಕೆ ಹೋಗಿ ಬಣ್ಣ ಎರಚುವುದಾಗಲಿ ಅಥವಾ ಮಹಿಳಾ ವಿದ್ಯಾರ್ಥಿ ನಿಲಯಗಳ ಬಳಿ ತೆರಳಿ ಮಹಿಳಾ ವಿದ್ಯಾರ್ಥಿಗಳ ಮೇಲೆ ಬಣ್ಣ ಎರಚುವುದನ್ನು ನಿಷೇಧಿಸಿದ್ದು, ಯಾರಾದರೂ ಕಿಡಿಗೇಡಿತನಕ್ಕೆ ಮುಂದಾದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು
- ಧ್ವನಿವರ್ಧಕ ಅಳವಡಿಕೆ ನಿಯಮವನ್ನು ಮತ್ತು ಅನುಮತಿಯನ್ನು ಸಂಬಂಧಪಟ್ಟ ಆಯೋಜಕರು ಕಟ್ಟುನಿಟ್ಟಾಗಿ ಪಾಲಿಸುವುದು.
- ಬಣ್ಣ ಎರಚುವ ನೆಪದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತನೆ ಮಾಡುವವರು, ಚುಡಾಯಿಸುವವರು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಲಾಗುವುದು
- ಮದ್ಯಪಾನ ಸೇವನೆ ಮಾಡಿ ಅತಿವೇಗ ಅಪಾಯಕಾರಿಯಾಗಿ ವಾಹನ ಚಾಲನೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು
- ಬಣ್ಣ ಹಚ್ಚುವ ಸಮಯದ ಕೊನೆಯ ಹಂತದಲ್ಲಿ ಕೆಲವು ಕಿಡಿಗೇಡಿಗಳು ಮೈ ಮೇಲಿನ ಬಟ್ಟೆಗಳನ್ನು ಹರಿದು ಸಾರ್ವಜನಿಕವಾಗಿ ಅಸಯ್ಯವಾಗುವ ರೀತಿಯಲ್ಲಿ ನೃತ್ಯ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವುದು
- ಧಾರ್ಮಿಕ ಕಟ್ಟಡಗಳಾದ ಚರ್ಚು, ಮಸೀದಿ, ದರ್ಗಾ ಮತ್ತು ದೇವಾಲಯಗಳಿಗೆ ಬಣ್ಣ ಎರಚವಂತಿಲ್ಲ.
- ದ್ವಿಚಕ್ರ ವಾಹನಗಳಲ್ಲಿ ೩ ಜನರು ಸೇರಿ ಸವಾರಿ ಮಾಡಿಕೊಂಡು ಚಲಿಸುವುದಾಗಲಿ, ವಾಹನದ ಸೈಲೆನ್ಸ್ರ್ಗಳನ್ನು ತೆಗೆದು ಕರ್ಕಶವಾದ ಶಬ್ದವನ್ನು ಉಂಟುಮಾಡುವ ಸೈಲೆನ್ಸರ್ ಗಳನ್ನು ಉಪಯೋಗಿಸುವುದು ಕಂಡುಬಂದಲ್ಲಿ ಅಂತಹ ವಾಹನಗಳನ್ನು ಸ್ವಾದೀನ ಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು.
ದ್ವಿಚಕ್ರ ವಾಹನಗಳ ನಂಬರ್ ಪ್ಲೇಟ್ಗಳಿಗೆ ನಂಬರ್ ಕಾಣದಂತೆ ಬಟ್ಟೆ ಕಟ್ಟುವುದು ಹಾಗೂ ಬಣ್ಣ, ಗ್ರೀಸ್ ಹಚ್ಚಿಕೊಂಡು ಸಂಚರಿಸುವುದು ಅಪರಾಧವಾಗುತ್ತದೆ. ಅಂತಹ ವಾಹನಗಳು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. - ಕಾಮದಹನವನ್ನು ಹಾಗೂ ಹೋಳಿ ಹಬ್ಬವನ್ನು ನಿಗಧಿತ ಸಮಯಕ್ಕೆ ಮುಕ್ತಾಯ ಮಾಡುವುದು.
- ಹೋಳಿ ಹಬ್ಬದ ಸಂಬಂಧ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪ್ರಚೋಧನಕಾರಿ ಪೋಸ್ಟರ್ ಗಳನ್ನು ಹಾಕುವುದಾಗಲೀ, ಸುಳ್ಳುಸುದ್ದಿ-ಪ್ರಚೋದನಕಾರಿ ಸಂಧೇಶಗಳನ್ನು ಹರಿಬಿಡುವುದಾಗಲಿ ಹಾಗೂ ಯಾವುದೇ ರ್ಮದ ವಿರುದ್ದ / ವ್ಯಕ್ತಿಯ ವಿರುದ್ದಅವಹೇಳನಕಾರಿ ಪೋಸ್ಟರ್ /ಸಂದೇಶಗಳನ್ನುಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು/ ರವಾನಿಸುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕಟ್ಟು ನಿಟ್ಟಿನ ಕಾನೂನು ಕ್ರಮ ವಹಿಸಲಾಗುವುದು.
- ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಜಾತ್ರೆ, ಹಬ್ಬ , ಮೆರವಣಿಗೆ, ಕರ್ಯಾಕ್ರಮ ನಡೆಸುವ ಬಗ್ಗೆ ಹಾಗೂ ಫ್ಲೆಕ್ಸ್ – ಬ್ಯಾರ್ಸ ಗಳನ್ನು ಹಾಕುವುದಕ್ಕೆ ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆಯುವುದು



