Connect with us

Dvgsuddi Kannada | online news portal | Kannada news online

ದಾವಣಗೆರೆ: ಸಾಲಬಾಧೆ ತಾಳಲಾಗದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೈತ…

death

ದಾವಣಗೆರೆ

ದಾವಣಗೆರೆ: ಸಾಲಬಾಧೆ ತಾಳಲಾಗದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೈತ…

ದಾವಣಗೆರೆ: ಸಾಲಬಾಧೆ ತಾಳಲಾಗದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

ಭೀಮಾನಾಯ್ಕ್ (38) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ. ಜಮೀನಿನಲ್ಲಿ ಮೆಕ್ಕೆಜೋಳ ಬೆಳೆ ಹಾಕಿದ್ದು ಮಳೆ ಇಲ್ಲದೆ ಹಿನ್ನೆಲೆ ನಷ್ಟ ಅನುಭವಿಸಿದ್ದನು. ಹೆಚ್​ಡಿಎಫ್​​ಸಿ ಬ್ಯಾಂಕ್​​ನಲ್ಲಿ 1.70 ಲಕ್ಷ ರೂ. ಧರ್ಮಸ್ಥಳ ಸಂಘದಲ್ಲಿ 3 ಲಕ್ಷ ರೂ. ಗ್ರಾಮೀಣ ಕೂಟದಲ್ಲಿ 40 ಸಾವಿರ ರೂ. ಸೇರಿದಂತೆ ಕೆಲವು ಕಡೆ ಸುಮಾರು 12 ಲಕ್ಷ ರೂ. ಸಾಲ ಮಾಡಿದ್ದನು.

ತೀವ್ರ ಬರಗಾಲ ಬಿದ್ದಿದ್ದು, ಬೆಳೆ ಇಲ್ಲದ್ದರಿಂದ ಸಾಲ ತೀರಿಸಲಾಗದೆ ಮನನೊಂದಿದ್ದ ರೈತ ಭೀಮಾನಾಯ್ಕ್,ಮನನೊಂದು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top