ದಾವಣಗೆರೆ: ಸಾಲಬಾಧೆ ತಾಳಲಾಗದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ಭೀಮಾನಾಯ್ಕ್ (38) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ. ಜಮೀನಿನಲ್ಲಿ ಮೆಕ್ಕೆಜೋಳ ಬೆಳೆ ಹಾಕಿದ್ದು ಮಳೆ ಇಲ್ಲದೆ ಹಿನ್ನೆಲೆ ನಷ್ಟ ಅನುಭವಿಸಿದ್ದನು. ಹೆಚ್ಡಿಎಫ್ಸಿ ಬ್ಯಾಂಕ್ನಲ್ಲಿ 1.70 ಲಕ್ಷ ರೂ. ಧರ್ಮಸ್ಥಳ ಸಂಘದಲ್ಲಿ 3 ಲಕ್ಷ ರೂ. ಗ್ರಾಮೀಣ ಕೂಟದಲ್ಲಿ 40 ಸಾವಿರ ರೂ. ಸೇರಿದಂತೆ ಕೆಲವು ಕಡೆ ಸುಮಾರು 12 ಲಕ್ಷ ರೂ. ಸಾಲ ಮಾಡಿದ್ದನು.
ತೀವ್ರ ಬರಗಾಲ ಬಿದ್ದಿದ್ದು, ಬೆಳೆ ಇಲ್ಲದ್ದರಿಂದ ಸಾಲ ತೀರಿಸಲಾಗದೆ ಮನನೊಂದಿದ್ದ ರೈತ ಭೀಮಾನಾಯ್ಕ್,ಮನನೊಂದು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



