ದಾವಣಗೆರೆ: ನಗರದ ಜಯದೇವ ಸರ್ಕಲ್ ವೃತ್ತದಲ್ಲಿಂದು ಭಾರತ ಚುನಾವಣಾ ಆಯೋಗ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ,ಪರಿಸರ ಇಲಾಖೆ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾ ಆಂದೋಲನವನ್ನು ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿ ಡಾ.ವೆಂಕಟೇಶ್ ಎಂ.ವಿ ಉದ್ಘಾಟಿಸಿದರು.
ಮತದಾನದ ಜಾಗೃತಿ ಪ್ರತಿಜ್ಞಾ ವಿಧಿ ಸ್ವೀಕರಿಸಿ, ನಂತರ ನಿಮ್ಮ ಮತ ಅಮೂಲ್ಯ, ಕಡ್ಡಾಯವಾಗಿ ಮತದಾನ ಚಲಾಯಿಸಿ ,ಆಮಿಷ ಪ್ರಭಾವ ಬೆದರಿಕೆಗೆ ಮಣಿಯದಿರಿ,ನನ್ನ ಮತ,ನನ್ನ ಧ್ವನಿ,ನನ್ನ ಶಕ್ತಿ ಎಂದು ಘೋಷಣೆ ಕೂಗುತ್ತಾ ಜಾಥಾ ನಡೆಸಲಾಯಿತು. ಜಯದೇವ ಸರ್ಕಲ್ ನಿಂದ ಚರ್ಚ್ ರೋಡ್ ಮಾರ್ಗವಾಗಿ ರಾಜ್ಯ ಸರ್ಕಾರ ನೌಕರರ ಸಮುದಾಯ ಭವನದ ರಿಂಗ್ ರೋಡ್ ಸರ್ಕಲ್ ವರೆಗೆ ಜಾಥಾ ನಡೆಸಿ ರಿಂಗ್ ರೋಡ್ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಲಾಗುತ್ತು. ಈ ವೇಳೆ ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡೊಳ್ಳು ಬಾರಿಸುವುದರ ಮೂಲಕ ಕಾರ್ಯಕ್ರಮ ಮುಕ್ತಾಯಗೊಳಿಸಿದರು. ಡಿಎಚ್ಒ, ಮಹಾನಗರ ಪಾಲಿಕೆ ಆಯುಕ್ತರು, ಮಹಿಳಾ ಮತ್ತು ಮಕ್ಕಳ ಅಧಿಕಾರಿಗಳು ಹಾಜರಿದ್ದರು.



