ದಾವಣಗೆರೆ: ರಾಶಿ ಅಡಿಕೆ ಬೆಲೆಯಲ್ಲಿ ಸತತ ಕುಸಿತ; ಇಂದಿನ ಕನಿಷ್ಠ, ಗರಿಷ್ಠ ಬೆಲೆ ಎಷ್ಟಿದೆ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ಸತತ ಕುಸಿತ‌ ಮುಂದುವರೆದಿದೆ. ಮಾರ್ಚ್ 15ರಿಂದ ಆರಂಭವಾದ ಬೆಲೆ ಕುಸಿತ ಏಪ್ರಿಲ್ ನಲ್ಲಿಯೂ ಇಳಿಕೆಯಲ್ಲಿದೆ. ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ 57 ಸಾವಿರ ತಲುಪಿತ್ತು. ಹೀಗಾಗಿ ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ಒಳ್ಳೆಯ ರೇಟ್ ಸಿಗುವ ಸಾಧ್ಯತೆ ಇದೆ. ಏಪ್ರಿಲ್ 03ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 48,529 ರೂ.ಗಳಿದ್ದು, ಕನಿಷ್ಠ ಬೆಲೆ 46,620 ರೂ.ಗಳಾಗಿದೆ. ಕಳೆದ 10 ದಿನದ ಹಿಂದೆ 49,500 ರೂಪಾಯಿ ಇತ್ತು.

ಇನ್ನೂ ಜಿಲ್ಲೆಯಲ್ಲಿ ಅಂತರ್ಜಲ‌‌‌ ಮಟ್ಟ ತೀವ್ರ ಕುಸಿದಿದ್ದು, ಹೇಗಾದ್ರೂ ಮಾಡಿ ಏಪ್ರಿಲ್, ಮೇ ತಿಂಗಳಲ್ಲಿ ಅಡಿಕೆ ತೋಟ ಬದುಕಿಸಿಕೊಂಡರೆ ಸಾಕು ಎನ್ನುತ್ತಿದ್ದಾರೆ ರೈತರು. ಅಡಿಕೆ ತೋಟದಲ್ಲಿ ಅಡಿಕೆ ಕಾಯಿ ಕಟ್ಟುವ ಕಾರ್ಯ ಶುರುವಾಗಿದೆ. ಆದರೆ, ಜಿಲ್ಲೆಯಲ್ಲಿ ಬಿಸಿ ವಾತಾವರಣ ನಿರ್ಮಾಣವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ತಾಪಮಾನಕ್ಕೆ ಹರಳು ಉದುರುತ್ತಿವೆ. ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದ್ದು, ಬೋರ್ ವೆಲ್ ಗಳು ಬತ್ತಿ‌ ಹೋಗಿವೆ. ಇನ್ನೂ ಕೆಲವು ಕಡೆ ರೈತರು ಟ್ಯಾಂಕರ್ ಮೊರೆ ಹೋಗಿದ್ದಾರೆ.

2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ವರ್ಷದಲ್ಲಿಯೇ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ರೂ.ಗೆ ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 48 ಸಾವಿರ ಗಡಿ ದಾಟಿತ್ತು. ಇದೀಗ 2024 ಜನವರಿ 15ರಂದು ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಿಂದ ಸತತ ಕುಸಿತ ಕಂಡು ಈಗ 48ಸಾವಿರದಿಂದ 49 ಸಾವಿರ ಗಡಿ ಸಮೀಪ ಬಂದಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಏಪ್ರಿಲ್ 03ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 46,620 ರೂ, ಗರಿಷ್ಠ ಬೆಲೆ 48,529 ಹಾಗೂ ಸರಾಸರಿ ಬೆಲೆ 47,706ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 33,301 ರೂ‌.ಗೆ ಮಾರಾಟವಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *