ದಾವಣಗೆರೆ: ಶಿಕ್ಷಕಿಯೊಬ್ಬರನ್ನು ವಂಚಿಸಿ ಅತ್ಯಾಚಾರವೆಸಗಿದ ಆರೋಪ ಆರೋಪದಡಿ ನಗರದ ಜಯನಗರದ ಡಿಎಚ್ಎಂ ಚರ್ಚ್ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಾದ್ರಿ ರಾಜಶೇಖರ್(58) ಬಂಧಿತ ಆರೋಪಿ. ಅತ್ಯಾಚಾರವೆಸಗಿ ವಂಚಿಸಿದ್ದಾರೆಂದು ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಸಂತ್ರಸ್ತ ಮಹಿಳೆ ದೂರು ನೀಡಿದ್ದರು. ಆರೋಪಿ ವಿರುದ್ಧ ಸೆಕ್ಷನ್ 376,(2) (2), 354(2), 323, 504, 506, 417, 420 ಪ್ರಕರಣ ದಾಖಲಾಗಿತ್ತು. ಕೃತ್ಯವೆಸಗಿ ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪಾದ್ರಿಯ ಮೊಬೈಲ್ ಲೊಕೇಷನ್ ಆಧರಿಸಿ ಹೈದರಾಬಾದ್ನಲ್ಲಿ ಕೆಟಿಜೆ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗಬಂಧನಕ್ಕೆ ಒಳಪಡಿಸಲಾಗಿದೆ.
58ರ ಇಳಿ ವಯಸ್ಸಿನ ಪಾದ್ರಿ ಪಿ ರಾಜಶೇಖರ್ ಕೃತ್ಯಎಸಗಿದ್ದನು. ಪಾದ್ರಿಯ ಕೃತ್ಯ ಇದೇ ಮೊದಲನೇ ಅಲ್ಲ, ಈ ಹಿಂದೆ ಚರ್ಚೆಗೆ ಬರುತ್ತಿದ್ದ ಹಲವು ಸ್ತ್ರೀಯರ ಮುಂದೆ ಅಸಭ್ಯವಾಗಿ ವರ್ತಿಸಿದ್ದ. ಪಾದ್ರಿಯ ವಿಕೃತ ಕಾಮುಕತನಕ್ಕೆ ಆತನ ಪುತ್ರಿಯೇ ಸುದ್ದಿಗೋಷ್ಠಿ ನಡೆಸಿ ಬಯಲು ಪ್ರಕರಣ ಬಯಲು ಮಾಡಿದ್ದಳು. ಪಾದ್ರಿ ರಾಜಶೇಖರ್ ಹಿಂದಿನಿಂದ ಇಂಥ ಕೃತ್ಯಗಳನ್ನೇ ಮಾಡಿಕೊಂಡು ಬಂದಿದ್ದಾರೆ. ಆದರೆ ಯಾರೂ ದೂರು ದಾಖಲು ಮಾಡಿರಲಿಲ್ಲ. ದೂರು ದಾಖಲಾದ ಬಳಿಕ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಈಗ ಬಂಧಿಸಲಾಗಿದೆ.



