ದಾವಣಗೆರೆ: ಜಿಲ್ಲೆಯಲ್ಲಿ ಬರ, ಬಿಸಿಲಿನ ತಾಪಮಾನ ಹೆಚ್ಚಳ. ಮತ್ತೊಂದೆಡೆ ಎಲ್ಲ ಕಡೆ ನೀರಿನ ಅಭಾವ ಉಂಟಾಗಿದೆ. ಇದರಿಂದ ಜನ, ಜಾನುವಾರುಗಳ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಜೀವಜಲದ ಅಭಾವ ಕಾಡುತ್ತಿದೆ. ಹೀಗಾಗಿ ಪಕ್ಷಿಗಳಿ ಜೀವ ಜಲ ನೀಡಲು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನಿಂದ ಮಾಡಿದ ಮಡಿಕೆ, ಪಾತ್ರೆಗಳಲ್ಲಿ ನೀರು ಶೇಖರಣೆ ಮಾಡಿಡಲು ಹಾಗೂ ನೀರು ಕಡಿಮೆಯಾಗಂತೆ ದಿನನಿತ್ಯ ನೀರು ಹಾಕುವಂತೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಈ ವರ್ಷ ತೀವ್ರ ಬರದ ವಾತಾವರಣ ನಿರ್ಮಾಣವಾಗಿದೆ. ಬೆಳೆಗಳಿಗೆ ಇರಲಿ, ಕುಡಿಯುವುದಕ್ಕೂ ನೀರಿನ ಕೊರತೆ ಉಂಟಾಗಿದೆ. ಸರ್ಕಾರಿ ಕಟ್ಟಡಗಳಲ್ಲಿಯೂ ನೀರಿನ ಅಭಾವ ಉಂಟಾಗಿದೆ. ಪಕ್ಷಿಗಳಿಗೆ ನೀರಿನ ಒದಗಿಸಲು ಜಿಲ್ಲಾಧಿಕಾರಿ ಈ ಆದೇಶ ಮಾಡಿದ್ದಾರೆ. ಇದು ಕೇವಲ ಸರ್ಕಾರಿ ಕಚೇರಿಗಳಿಗೆ ಸೀಮಿತವಾಗದೇ ಸಾರ್ವಜನಿಕರೂ ಸ್ವಯಂ ಪ್ರೇರಣೆಯಿಂದ ತಮ್ಮ ತಮ್ಮ ಮನೆಯ ಮಹಡಿ ಮೇಲೆ ಮಡಿಕೆ, ಪಾತ್ರೆಗಳಲ್ಲಿ ನೀರು ತುಂಬಿಸಿಡಬೇಕಿದೆ.



