ದಾವಣಗೆರೆ: 18ನೇ ಲೋಕಸಭಾ ಚುನಾವಣೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಸ್ವೀಪ್ ಸಮಿತಿಯಿಂದ ಮದುವೆ ಮನೆಯೊಂದರಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.
ಜಿಲ್ಲೆಯ ಜಗಳೂರು ತಾಲ್ಲೂಕಿನ ಗುರುಸಿದ್ದಾಪುರದಲ್ಲಿ ಹಾಲೇಶ್ ಮತ್ತು ಪ್ರೀತಿ ಮದುವೆ ನಡೆಯುತ್ತಿತ್ತು. ಈ ಮದುವೆ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಮೂಡಿಸಿ ನವ ದಂಪತಿಗಳು ಸೇರಿದಂತೆ ಬಂಧು-ಬಾಂಧವರಲ್ಲಿ ಮತದಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.



