ಸೋಮವಾರವೇ ಸಂಪುಟ ವಿಸ್ತರಣೆ: ಸಿ.ಎಂ.ಯಡಿಯೂರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಸೋಮವಾರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕೃತವಾಗಿ ಘೋಷಿಸಿದರು.

ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದ ಸಿಎಂ, ಶುಕ್ರವಾರ ದೆಹಲಿಯಲ್ಲಿ ಎರಡ್ಮೂರು ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಇವತ್ತು  ಅಧಿಕೃತವಾಗಿ  ಸೋಮವಾರವೇ ಸಂಪುಟ ವಿಸ್ತರಣೆ ಮಾಡುವುದಾಗಿ ಖಚಿತಪಡಿಸಿದರು.

yadiyurappa amith sha

ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ , ಗೃಹ ಸಚಿವ ಅಮಿತ್ ಶಾ  ಜೊತೆ ಮಾತನಾಡಿದ್ದ ಸಿಎಂ, ಒಪ್ಪಿಗೆ ಪಡೆದಿದ್ದರು. ನಾವು ನೀಡಿದ ಪಟ್ಟಿಯನ್ನು ಪಕ್ಷದ ವರಿಷ್ಠರು ಒಪ್ಪಿದ್ದಾರೆ. ಕೆಲವರನ್ನು ಮನವೊಲಿಸಿ ಹಾಗೂ ರಾಜ್ಯದ ಕೆಲ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದರು.

ಇದೀಗ ಸೋಮವಾರವೇ ಸಂಪುಟ ವಿಸ್ತರಣೆ ಆಗುವುದರಿಂದ ಯಾರೆಲ್ಲ ಸಂಪುಟ ಸೇರುತ್ತಾರೆ ಅನ್ನೋ ಕುತೂಹಲ ಹೆಚ್ಚಿದೆ. ಜೊತೆ ಸದ್ಯವಿರುವ ಮೂರು ಡಿಸಿಎಂ ಸ್ಥಾನಗಳನ್ನು ಮುಂದುವರಿಸಲಾಗುವುದು. ಮತ್ತೆ ಹೊಸ ಡಿಸಿಎಂ ಹುದ್ದೆ ಸೃಷ್ಟಿಸಲ್ಲ ಎಂದು ಹೇಳಿದ್ದಾರೆ. ಇದರಿಂದ  ಉಪಮುಖ್ಯಮಂತ್ರಿ ಕನಸು ಕಾಣುತ್ತಿದ್ದ ಸಚಿವ ಶ್ರೀರಾಮುಲು ಮತ್ತು ಶಾಸಕ ರಮೇಶ್ ಜಾರಕಿಹೊಳಿಗೆ ಹೇಗೆ ಸಮಾಧಾನ ಮಾಡ್ತಾರೆ ಎಂಬುದು ಕಾದು ನೋಡಬೇಕಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *