ದಾವಣಗೆರೆ: ಭತ್ತ ನೇರ ಬಿತ್ತನೆಯ ತಂತ್ರಜ್ಞಾನ ಲಾಭದಾಯಕ; ಬೇಸಾಯ ತಜ್ಞ ಮಲ್ಲಿಕಾರ್ಜುನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕಳೆದ ವರ್ಷ ಮಳೆಯ ಅಭಾವದಿಂದ ಮುಂಗಾರು ಮತ್ತು ಹಿಂಗಾರಿನ ಭತ್ತದ ಬೆಳೆಗಳಲ್ಲಿ ಸಾಕಷ್ಟು ನಷ್ಟವನ್ನು ಅನುಭವಿಸಿದ್ದೇವೆ. ಈ ನಿಟ್ಟಿನಲ್ಲಿ ರೈತ ಬಾಂಧವರು ಕಡಿಮೆ ನೀರು ಬಳಕೆ ಮಾಡಿಕೊಂಡು ಭತ್ತ ಬೆಳೆಯಲು ಮುಂದಾಗಬೇಕು ಎಂದು ಬೇಸಾಯ ತಜ್ಞ ಬಿ.ಓ . ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗೆ ಭತ್ತದ ಬೆಳೆಯ ಬಗ್ಗೆ ಆಯೋಜಿಸಿದ್ದ ತರಬೇತಿಯಲ್ಲಿ ಮಾತನಾಡಿ, ಕಳೆದ ಐದು ವರ್ಷಗಳಿಂದ ಅನೇಕ ಗ್ರಾಮಗಳಲ್ಲಿ ನೇರ ಭತ್ತ ಬಿತ್ತನೆ ತಂತ್ರಜ್ಞಾನವನ್ನು ರೈತರಿಗೆ ಪರಿಚಯ ಮಾಡಿಕೊಟ್ಟಿದ್ದೇವೆ, ಒಂದು ಎಕರೆ ಪ್ರದೇಶಕ್ಕೆ ಎಂಟರಿಂದ 10 ಕೆಜಿ ಬಿತ್ತನೆ ಬೀಜ ಬೇಕಾಗುತ್ತದೆ, ಜೊತೆಗೆ ಸಮಗ್ರ ಕಳೆ ಮತ್ತು ಕೀಟ ರೋಗಗಳ ನಿರ್ವಹಣೆ ಕೈಗೊಂಡರೆ ಈ ಪದ್ಧತಿಯಲ್ಲಿ ಸಾಮಾನ್ಯ ಪದ್ಧತಿಗಿಂತ ಇಳುವರಿನ್ನು ಹೆಚ್ಚು ಪಡೆಯಬಹುದು ಹಾಗೂ ಶೇಕಡ 40ರಷ್ಟು ನೀರಿನ ಉಳಿತಾಯವನ್ನು ಮಾಡಬಹುದು ಎಂದರು.

ಮಣ್ಣು ವಿಜ್ಞಾನಿ ಎಚ್ಎಂ ಸಣ್ಣ ಗೌಡರ, ರೈತರಿಗೆ ಮಣ್ಣು ಮಾದರಿ ತೆಗೆಯುವ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಒದಗಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರದ ವಿಸ್ತರಣ ತಜ್ಞರಾದ ರಘುರಾಜ್, ಗ್ರಾಮ ಪಂಚಾಯತಿ ಅಧ್ಯಕ್ಷರು, ಪಿಡಿಒ ಸದಸ್ಯರು , ಕೃಷಿ ಮತ್ತು ಪಶು ಸಕಿ ಹಾಗೂ ಪ್ರಗತಿಪರ ರೈತರು ಭಾಗವಹಿಸಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *