ದಾವಣಗೆರೆ: ಚುನಾವಣಾ ಜಾಗೃತಿಗೆ ಗಾಳಿಪಟ ಪ್ರದರ್ಶನ; ಗಾಳಿಪಟದಂತೆ ಸ್ವತಂತ್ರವಾಗಿ ಮತದಾನ ಮಾಡಲು ಕರೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಇವರ ಸಹಾಯದೊಂದಿಗೆ ಸೋಮವಾರ ಹೈಸ್ಕೂಲ್ ಮೈದಾನದಲ್ಲಿ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಬಿ.ಇಟ್ನಾಳ್ ಮಾತನಾಡಿ ವಿಭಿನ್ನ ರೀತಿಯಲ್ಲಿ ಉನ್ನತ ಮಟ್ಟದಲ್ಲಿ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಸಂದೇಶ ನೀಡಲಾಗಿದೆ. ಗಾಳಿಪಟವು ಹೇಗೆ ಸ್ವತಂತ್ರವಾಗಿ ಹಾರಾಡುತ್ತದೆ, ಅದೇ ರೀತಿ ನೀವು ಸಹ ಸ್ವತಂತ್ರವಾಗಿ, ನ್ಯಾಯ ಸಮ್ಮತವಾಗಿ, ಯಾವುದೇ ಆಮಿಷಗಳಿಗೆ ಒಳಗಾಗದೆ ಮೇ 7 ರಂದು ತಮ್ಮ ಅಮೂಲ್ಯ ಮತ ಚಲಾಯಿಸಬೇಕೆಂದು ತಿಳಿಸಿದರು.

ಗಾಳಿಪಟದಲ್ಲಿ ಮತದಾರರ ಸಂದೇಹ, ಮಾಹಿತಿಗೆ 1950 ಬಳಸಿ, ಯಾವುದೇ ಮತದಾರರು ಮತದಾನದಿಂದ ಹೊರಗುಳಿಯಬಾರದು. ಮೇ 7 ರಂದು ನಮ್ಮ ನಡೆ, ಮತಗಟ್ಟೆ ಕಡೆ ಎಂಬಿತ್ಯಾದಿ ಘೋಷವಾಕ್ಯಗಳು ಗಾಳಿಪಟದಲ್ಲಿ ರಾರಾಜಿಸುತ್ತಿದ್ದವು. ಕಾರ್ಯಕ್ರಮದಲ್ಲಿ ಚುನಾವಣಾ ಐಕಾನ್ ಚಿತ್ರನಟ ಪೃಥ್ವಿ ಶಾಮನೂರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕರು ಡಾ; ಚಂದ್ರಶೇಖರ್ ಸುಂಕದ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಾಯಿತ್ರಿ ಕೆ.ಎಚ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬೇಬಿ ಸುನೀತ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *