ದಾವಣಗೆರೆ: ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಒಂದೆಡೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ತನ್ನ ತಾಯಿ ಸಾವಿಗೆ ಕಾರಣನಾದ ತಂದೆಯನ್ನೇ ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಲಕ್ಕೀಂಪುರ ಗ್ರಾಮದಲ್ಲಿ ನಡೆದಿದೆ.
ಕಲ್ಲು ಎತ್ತಿಹಾಕಿ ತಂದೆ ಅಂಜನಪ್ಪ (60)ನನ್ನು ಮಗ ರಮೇಶ್ ಹತ್ಯೆ ಮಾಡಿದ್ದಾನೆ. ಅಜನಪ್ಪ ಪ್ರತಿದಿನ ಕುಡಿದುಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಪತಿಯ ಕಿರುಕುಳಕ್ಕೆ ಪತ್ನಿ ತಿಪ್ಪಮ್ಮ (52) ನೇಣಿಗೆ ಕೊರಳೊಡ್ಡಿದ್ದಳು. ಇದರಿಂದ ಆಕ್ರೋಶಗೊಂಡ ಮಗ ತಾಯಿ ಸಾವಿಗೆ ತಂದೆಯೇ ಕಾರಣವೆಂದು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಆರೋಪಿ ರಮೇಶ್ ನನ್ನು ಜಗಳೂರು ಪೊಲೀಸರು ಬಂಧಿಸಿದ್ದಾರೆ.



