ನಾನು, ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ; ಎಚ್. ವಿಶ್ವನಾಥ್ ಅವರಿಗೆ ಮಂತ್ರಿ ಸ್ಥಾನ ಕೊಡಿ: ಶಾಸಕ ಮಹೇಶ್ ಕಮಟಳ್ಳಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ಕಗ್ಗಂಟಾಗಿ ಪರಿಣಮಿಸುತ್ತಿದೆ.   ಶಾಸಕ ಮಹೇಶ್ ಕುಮಟಳ್ಳಿ ನಾನು  ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ. ಆದರೆ, ಸೋತಿರುವ  ಎಚ್ . ವಿಶ್ವನಾಥ್ ಅವರಿಗೆ ಮಂತ್ರಿ ಸ್ಥಾನ ಕೊಡಿ ಎಂದು ಶಾಸಕ ಮಹೇಶ್ ಕಮಟಳ್ಳಿ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಚುನಾವಣೆ  ಸಂದರ್ಭದಲ್ಲಿ 35 ಸಾವಿರ ಜನರ ಮುಂದೆ ನಾನು ಸೇರಿದಂತೆ 17 ಶಾಸಕರನ್ನು ಮಂತ್ರಿ ಮಾಡ್ತೀನಿ ಅಂತ ಹೇಳಿದ್ದರು. ಯಡಿಯೂರಪ್ಪ ಮಾತು ತಪ್ಪಲ್ಲ ಅನ್ನೋ ವಿಶ್ವಾಸವಿದೆ. ಆದರೆ, ಇತ್ತೀಚಿನ ಬೆಳವಣಿಗೆಯಿಂದ ಗೊಂದಲಕ್ಕೆ ಒಳಗಾಗಿದ್ದೇನೆ.  ಚುನಾವಣೆ ಸಂದರ್ಭದಲ್ಲಿ  ಸಚಿವ ಸ್ಥಾನ ಕೊಡ್ತೀನಿ ಅಂದಿದ್ದರು. ಆದರೆ, ಇತ್ತೀಚಿನ ಬೆಳವಣಿಗೆ ನೋಡಿದರೆ, ನನ್ನ ಹೆಸರು ಕೈ ಬಿಡುತ್ತಾರೆ  ಅಂತ ಚರ್ಚೆ ಆಗ್ತಿದೆ. ಈ ಸುದ್ದಿ  ಮನಸ್ಸಿಗೆ ಬಹಳ  ನೋವು ಉಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಮೀರುವುದಿಲ್ಲ ಅನ್ನೋ ವಿಶ್ವಾಸವಿದೆ.  ಈ ಬಗ್ಗೆ ಇನ್ನು ಸಿಎಂ ಬಳಿ ನಾವು ಮಾತಾಡಿಲ್ಲ. ಬಿಜೆಪಿ ಸರ್ಕಾರ ಬರಲು ನೂರಾರು ಸಮಸ್ಯೆ ಎದುರಿಸಿದ್ದೇವೆ. ಹುಲಿ ಬಾಯಿಗೆ ತಲೆ ಕೊಟ್ಟು ಗೆದ್ದು ಬಂದಿದ್ದೇವೆ. ನಮ್ಮ ತ್ಯಾಗದಿಂದ ಈ ಸರ್ಕಾರ ಬಂದಿದ್ದೇವೆ. ಆದರೆ, ನನಗೆ ಮಂತ್ರಿ ಆಗಬೇಕು ಅನ್ನೋ ಆಸೆ ಇಲ್ಲ. ಆದರೆ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಮಾತು ಉಳಿಸಿಕೊಳ್ಳದಿದ್ದರೆ,  ಜನರ ದೃಷ್ಟಿಯಲ್ಲಿ ಯಡಿಯೂರಪ್ಪಗೆ  ಬಗ್ಗೆ ಕೆಟ್ಟ ಸಂದೇಶ ಹೋಗುತ್ತದೆ.

ಪಕ್ಷಕ್ಕಾಗಿ ತ್ಯಾಗ ಮಾಡಬೇಕು ಅಂದ್ರೆ ಮಾಡಲು ಸಿದ್ಧ. ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸುವುದಕ್ಕೂ ಸೈ, ಪಕ್ಷ ಸಂಘಟನೆ ಮಾಡುವುದಕ್ಕೂ ಸಿದ್ಧವಿದ್ದೇನೆ. ಆದರೆ, ಸೋತಿರುವ ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡಬೇಕು.ಚುನಾವಣೆಯಲ್ಲಿ ಸೋತಿರುವ ಲಕ್ಷ್ಮಣ ಸವದಿಗೆ ಡಿಸಿಎಂ ಸ್ಥಾನ ನೀಡಿದ್ದೀರಿ.  ವಿಶ್ವನಾಥ್ ರನ್ನ ಯಾಕೆ ಮಾಡಬಾರದು ಎಂದು ಪ್ರಶ್ನಿಸಿದರು.

 

 

 

.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *