Connect with us

Dvgsuddi Kannada | online news portal | Kannada news online

ದಾವಣಗೆರೆ: ಎರಡು ದಿನ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ; ಗುಂಪು ಸೇರುವುದು, ಮೆರವಣಿಗೆ ನಿಷೇಧ

IMG 20240503 202728

ದಾವಣಗೆರೆ

ದಾವಣಗೆರೆ: ಎರಡು ದಿನ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ; ಗುಂಪು ಸೇರುವುದು, ಮೆರವಣಿಗೆ ನಿಷೇಧ

ದಾವಣಗೆರೆ: ಲೋಕಸಭಾ ಚುನಾವಣೆ ಮತದಾನವು ಮೇ 7 ರಂದು ನಡೆಯಲಿದ್ದು ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮೇ 5 ರ ಸಂಜೆ 6 ಗಂಟೆಯಿಂದ ಮೇ 7 ರಂದು ಮತದಾನ ಮುಕ್ತಾಯವಾಗುವವರೆಗೂ ಜಿಲ್ಲೆಯಾದ್ಯಂತ 144 ಸೆಕ್ಷನ್ ಅನ್ವಯ ಎಲ್ಲಾ ಮತಗಟ್ಟೆಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

ಮತದಾರರನ್ನು ಹೊರತುಪಡಿಸಿ 5 ಜನರಿಗಿಂತ ಹೆಚ್ಚು ಗುಂಪು ಸೇರುವಂತಿಲ್ಲ, ಯಾವುದೇ ರಾಜಕೀಯ, ಧಾರ್ಮಿಕ ಮೆರವಣಿಗೆ ಮಾಡುವಂತಿಲ್ಲ, ಶಸ್ತ್ರಾಸ್ತ್ರಗಳು, ಮಾರಕಾಸ್ತ್ರ, ದೊಣ್ಣೆ, ಕಲ್ಲು, ಚಾಕು, ಇಟ್ಟಿಗೆ, ಕೋಲು ಸೇರಿದಂತೆ ದೈಹಿಕ ಹಿಂಸೆ ಮಾಡಬಲ್ಲ ಯಾವುದೇ ಆಯುಧಗಳನ್ನು ತೆಗೆದುಕೊಂಡು ಓಡಾಡುವಂತಿಲ್ಲ. ಪ್ರಚೋದನಾಕಾರಿ ಭಾಷಣ, ಸಭೆ, ಸಮಾರಂಭ ಮಾಡುವುದು ನಿಷೇಧ. ಮತಗಟ್ಟೆಯೊಳಗೆ ಮೊಬೈಲ್ ಫೋನ್, ಕಾರ್ಡ್‍ಲೆಸ್ ಫೋನ್ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಕ್ಷೇತ್ರದಲ್ಲದವರು ಕ್ಷೇತ್ರದಿಂದ ಹೊರ ಹೋಗಿರಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top