ಶಾಂತಿ ಸಾಗರ ಸರ್ವೇ ಕಾರ್ಯಕ್ಕೆ ಚಾಲನೆ: ಮೂರು ವಾರ ಸರ್ವೇ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿಸುದ್ದಿ.ಕಾಂ, ಚನ್ನಗಿರಿ: ಏಷ್ಯಾದ ಎರಡನೇ ಅತಿ ದೊಡ್ಡ ಕೆರೆಯಾದ ಶಾಂತಿಸಾರ ಕರೆ ಸರ್ವೇ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಯಿತು. ಮೂರು ವಾರಗಳ ಕಾಲ ಸರ್ವೇ ಕಾರ್ಯ ನಡೆಯಲಿದೆ.

ಖಡ್ಗ ಸಂಘಟನೆ ಮತ್ತು ಶಾಂತಿ ಸಾಗರ ಹಿತರಕ್ಷಣಾ ಮಂಡಳಿಯ ಸಸತ ಎರಡು ವರ್ಷಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ನೀರಾವರಿ ಮಂಡಳಿ ಜಂಟಿಯಾಗಿ ಸರ್ವೇ ಕಾರ್ಯ ಕೈಗೆತ್ತಿಕೊಂಡಿದ್ದು, 6,460 ಎಕೆರೆ ವಿಸ್ತೀರ್ಣ ಹೊಂದಿರುವ ಕೆರೆ ಒತ್ತುವರಿ ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಶನಿವಾರ ತಹಶಿಲ್ದಾರ್ ನಾಗರಾಜು ನೇತೃತ್ವದಲ್ಲಿ ಸರ್ವೇ ಕಾರ್ಯಕ್ಕೆ ಚಾಲನೆ ನೀಡಲಾಯಿತು.

 

ಶಾಂತಿ ಸಾಗರ ಹಿತರಕ್ಷಣಾ ಮಂಡಳಿಯ ಪಾಂಡೋಮಟ್ಟಿಯ ಶ್ರೀ ಗುರುಬಸವ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯ ತೇಜಸ್ವಿ ಪಟೇಲ್, ಖಡ್ಗ ಸಂಘಟನೆಯ ಬಿ.ಆರ್. ರಘು ಚನ್ನಗಿರಿ ಹಿರೇಮಠದ ಶ್ರೀ ಶಾಂತವೀರ ಮಹಾಸ್ವಾಮೀಜಿ ರೈತ ಮುಖಂಡರ ಸಮ್ಮಖದಲ್ಲಿ ಸರ್ವೇ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಸರ್ವೇ ಕಾರ್ಯಕ್ಕೆ ಚಾಲನೆ ನೀಡಲು ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಯಾರು ಕೂಡ ಬಂದಿರಲಿಲ್ಲ.

ರಾಷ್ಟ್ರೀಯ ಸಂಪತ್ತು ಉಳಿಸಬೇಕು
೬೪೬೦ ಎಕೆರೆ ವಿಸ್ತಿರ್ಣ ಹೊಂದಿರುವ ಸೊಳೆಕೆರೆಯಲ್ಲಿ ಕನಿಷ್ಟ ೧ ಸಾವಿರ ಎಕೆ ಒತ್ತುವರಿಯಾಗಿದೆ. ಕೆರೆ ಸುತ್ತಮುತ್ತ ೧೪ ಹಳ್ಳಿಗಳ್ಳಿದ್ದು, ಕೆರೆ ಒತ್ತುವರಿಯಾಗಿದೆ. 11 ನೇ ಶತಮಾನದಲ್ಲಿ ಕೆರೆ ನಿರ್ಮಾಣವಾಗಿದ್ದು, ಅಲ್ಲಿಂದ ಇಲ್ಲಿವರೆಗೆ ಕೆರೆ ಹೂಳು ಎತ್ತಿಲ್ಲ. ಸರ್ವೇ ಕಾರ್ಯ ನಡೆದಿಲ್ಲ. ರಾಷ್ಟ್ರೀಯ ಸಂಪತ್ತಾಗಿರುವ ಕೆರೆಯನ್ನು ಉಳಿಸಲು ಎಲ್ಲ ರೈತರು ಸಹಕರಿಸಬೇಕಿದೆ. ಕೆರೆಯಲ್ಲಿ ಈಗ 1.6 ಟಿಎಂಸಿ ನೀರು ಮಾತ್ರ ನಿಲ್ಲುತ್ತಿದೆ. ಕೆರೆಯಲ್ಲಿ ತುಂಬಿರುವ ಹೂಳು ಎತ್ತಿದರೆ ಕನಿಷ್ಟ 5 ಟಿಎಂಸಿ ನೀರನ್ನು ನಿಲ್ಲಿಸಲು ಸಾಧ್ಯವಿದೆ ಎಂದು ಎಂದು ಖಡ್ಗ ಸಂಘಟನೆ ರಆಜ್ಯಾಧ್ಯಕ್ಷ ಬಿ.ಆರ್. ರಘು ಹೇಳಿದರು.

shathi sagara dvgsuddi

ರೈತರನ್ನು ವಿಶ್ವಾಸಕ್ಕೆ ತಗೆದುಕೊಳ್ಳಿ
ಶಾಂತಿಸಾಗರ ಈಗ ಕೇವಲ ಚನ್ನಗಿರಿ ಜನರ ಜೀವ ಜಲವಾಗಿ ಮಾತ್ರ ಉಳಿದಿಲ್ಲ. ಅದು ದಾವಣಗೆರೆ ಮತ್ತು ಚಿತ್ರದುರ್ಗ ಜನರ ಜೀವ ಜಲವಾಗಿದೆ. ಇತಿಹಾಸ ಪ್ರಸಿದ್ಧವಾಗಿರುವ ಕೆರೆಯನ್ನು ಉಳಿಸುವ ಪ್ರಯತ್ನವನ್ನು ಎಲ್ಲರು ಮಾಡಬೇಕಿದೆ. ಈ ಸರ್ವೇ ಕಾರ್ಯದಲ್ಲಿ ರೈತರ ವಿಶ್ವಾಸ ತಗೆದುಕೊಳ್ಳುವುದು ಬಹಳ ಮುಖ್ಯವಾಗಿದೆ. ಅಧಿಕಾರಿಗಳು ಈ ದಿಸೆಯಲ್ಲಿ ಕಾರ್ಯನ್ಮುಖವಾಗಬೇಕಿದೆ ಎಂದು ಜಿಲ್ಲಾ ಪಂಚಾಯತಿ ಸದಸ್ಯ ತೇಜಸ್ವಿ ಪಟೇಲ್ ತಿಳಿಸಿದರು.

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336, 7483892205

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *