ದಾವಣಗೆರೆ ಜಿಲ್ಲೆ ರೈತರ ಜೀವನಾಡಿ ಭದ್ರಾ ಜಲಾಶಯ 68 ವರ್ಷ ಇತಿಹಾಸದಲ್ಲಿಯೇ ದಾಖಲೆಯ ಕಡಿಮೆ ನೀರು ಸಂಗ್ರಹ..!!! ಎಷ್ಟಿದೆ ನೀರಿನ ಸಂಗ್ರಹ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕಳೆದ ವರ್ಷದ ತೀವ್ರ ಮಳೆ ಕೊರತೆಯಿಂದ ರಾಜ್ಯದಲ್ಲಿಯೇ ಬರ ಆವರಿಸಿದೆ. ಅದರಲ್ಲೂ ದಾವಣಗೆರೆ ಜಿಲ್ಲೆ ರೈತರ ಜೀವನಾಡಿಯಾದ ಭದ್ರಾ ಜಲಾಶಯದ ಸುತ್ತಮುತ್ತಲಿನ ಮಲೆನಾಡಿನಲ್ಲಿಯೇ ಕಳೆದ ವರ್ಷ ನಿರೀಕ್ಷಿತ ಮಳೆ ಬೀಳಲಿಲ್ಲ. ಇದರಿಂದ ಮುಂಗಾರಿನಲ್ಲಿ ಜಲಾಶಯ ಕೂಡ ತುಂಬಲಿಲ್ಲ.‌ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಹರಿಸುವುದಿರಲಿ, ಮುಂಗಾರು ಬೆಳೆಗೆಯೇ ಹೋರಾಟ‌ ಮಾಡಿ ನೀರು ತರುವಂತಾಗಿತ್ತು. ಕಳೆದ ವರ್ಷ(2023) ಮೇ ತಿಂಗಳಲ್ಲಿ 145.7 ಅಡಿ ಸಂಗ್ರಹವಿದ್ದ ಭದ್ರಾ ಜಲಾಶಯ ನೀರು, ಈ ವರ್ಷ (2024) ಮೇ 4ರ ವೇಳೆಗೆ‌ 116.5 ಅಡಿ ಇದೆ. ಇದು 68 ವರ್ಷದ ಇತಿಹಾಸದಲ್ಲಿಯೇ  ನೀರಿನ ಸಂಗ್ರಹ‌ ದಾಖಲೆಯ ಕುಸಿತ ಕಂಡಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಲಕ್ಕವಳ್ಳಿಯ ಭದ್ರಾ ಜಲಾಶಯ ತನ್ನ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ನೀರು ಸಂಗ್ರಹವಾಗಿದೆ. ಕಳೆದ ವರ್ಷ(2023) ಇದೇ ದಿನ 145.7‌ಅಡಿ ನೀರಿತ್ತು. ತೀವ್ರ ಬರಗಾಲವಿದ್ದ 2004ಕ್ಕಿಂತ ಮುನ್ನ 2003ರಲ್ಲಿ 118 ಅಡಿ ನೀರಿನ ಸಂಗ್ರಹವಿತ್ತು. ಈವರೆಗಿನ ಕನಿಷ್ಠ ನೀರು ಸಂಹ್ರಹವಾಗಿತ್ತು. ಈಗ 2024 ಮೇ 4 ರಂದು ಜಲಾಶಯದಲ್ಲಿ 116.5 ಅಡಿ ನೀರು ಇದೆ. ಇದು 68 ವರ್ಷ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ನೀರು ಸಂಗ್ರಹವಾಗಿದೆ

ಭದ್ರಾ ಜಲಾಶಯದಲ್ಲಿ ಪ್ರಸ್ತುತ 8.5 ಟಿಎಂಸಿ ಅಡಿ ಡೆಡ್‌ಸ್ಟೋರೇಜ್‌ ಸೇರಿ ಒಟ್ಟು 13.8 ಟಿಎಂಸಿ ಅಡಿ ನೀರಿನ ಮಾತ್ರ ಸಂಗ್ರಹವಿದೆ. ಜಲಾಯಶಯ ನೀರು ಇಷ್ಟೊಂದು ಕಡಿಮೆ ಸಂಗ್ರಹವಾಗಿರುವುದು 68 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲಾಗಿದೆ. ಜಲಾಶಯದ ಬಲದಂಡೆ ನಾಲೆಯ ಗೇಟ್ ಸಂಪೂರ್ಣ ತೆರೆಯಲಾಗಿದೆ. ಕಳೆದ ಮೂರು ದಿನಗಳಿಂದ 2,000 ಕ್ಯುಸೆಕ್‌ನಷ್ಟು ಮಾತ್ರ ಹರಿಯುತ್ತಿದೆ. ಇದೇ ರೀತಿ ಇನ್ನು ಎರಡು ದಿನ‌ (ಮೇ 6‌ ರಾತ್ರಿ ವರೆಗೆ) ನೀರು ಹರಿಸಿ ನಿಲ್ಲಿಸಲಾಗುವುದು ಎಂದು ಭದ್ರಾ ಜಲಾಶಯದ ಕಾರ್ಯನಿರ್ವಾಹಕ ಎಂಜಿನಿಯರ್‌ ಎನ್ .ರವಿಕುಮಾರ್‌ ಮಾಹಿತಿ ನೀಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *