Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್ಸೆಸ್ಸೆಲ್ಸಿ‌ ಫಲಿತಾಂಶದಲ್ಲಿ ಫೇಲಾಗುವ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆ

davangere 1

ದಾವಣಗೆರೆ

ದಾವಣಗೆರೆ: ಎಸ್ಸೆಸ್ಸೆಲ್ಸಿ‌ ಫಲಿತಾಂಶದಲ್ಲಿ ಫೇಲಾಗುವ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆ

ದಾವಣಗೆರೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.‌ ಫಲಿತಾಂಶ ದಿನನವಾದ ನಿನ್ನೆ (ಮೇ 09) ಬೆಳಗ್ಗೆಯೇ ಮನೆಯಲ್ಲಿ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಆರ್.ಕುಶಾಲ್ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಶಾಲ್ ಕಳೆದ ರಾತ್ರಿ
ಎಲ್ಲರ ಜೊತೆ ಮನೆಯಲ್ಲಿ ನಗುತ್ತಲೇ ಊಟ ಮಾಡಿ, ಮಲಗಿದ್ದ. ಆದರೆ, ಅನುತ್ತೀರ್ಣನಾಗುವ ಭಯದಲ್ಲೇ ರಾತ್ರಿ ಕಳೆದಿದ್ದಾನೆ. ರಾತ್ರಿ ಮಲಗಿದ್ದ ಕುಶಾಲ್ ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು
ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಿಗ್ಗೆ ಮನೆ ಯವರು ನೋಡಿದಾಗ ಕುಶಾಲ ನೇಣಿಗೆ ಶರಣಾಗಿರುವುದು ಗೊತ್ತಾಗಿದೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಫಲಿತಾಂಶ ಪ್ರಕಟಗೊಂಡಾಗ ಕುಶಾಲ್ ಇಂಗ್ಲಿಷ್, ವಿಜ್ಞಾನದಲ್ಲಿ ಅನುತ್ತೀರ್ಣನಾಗಿದ್ದನು. ಕನ್ನಡದಲ್ಲಿ 80 ಅಂಕ, ಇಂಗ್ಲಿಷ್ 29, ಹಿಂದಿ 46, ಗಣಿತ 47, ಸಮಾಜ ವಿಜ್ಞಾನ 47 ಸೇರಿದಂತೆ ಒಟ್ಟು 273 ಅಂಕ ಪಡೆದಿದ್ದಾನೆ. ಮಗನನ್ನು ಕಳೆದುಕೊಂಡ ಹೆತ್ತವರ ಗೊಳಾಟ ಮುಗಿಲುಮುಟ್ಟಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top