ದಾವಣಗೆರೆ: ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆಯಿಂದ ಸ್ವಾಗತ ಫಲಕಕ್ಕೆ ಡಿಕ್ಕಿ; ಡಿಕ್ಕಿ ರಭಸಕ್ಕೆ ಫಿಲ್ಲರ್ ಸಹಿತ ಕಿತ್ತು ಬಿದ್ದ ಸ್ವಾಗತ ಫಲಕ..!!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಟಿಪ್ಪರ್ ಲಾರಿಯೊಂದು ಜಿಲ್ಲಾ ಕೇಂದ್ರವನ್ನು ಸ್ವಾಗತಿಸುವ ಫಲಕಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಫಿಲ್ಲರ್ ಸಮೇತ ಫಲಕಗಳು ಕಿತ್ತುಬಂದ ಘಟನೆ ನಿನ್ನೆ (ಮೇ 10) ರಾತ್ರಿ ನಡೆದಿದೆ‌.

ನಗರದ ಹೊರವಲಯದ ಬಾತಿ ಸಮೀಪ ಈ ಘಟನೆ ನಡೆದಿದೆ‌‌ ಬಾತಿ ಕಡೆಯಿಂದ ನಗರಕ್ಕೆ ಬರುತ್ತಿದ್ದ ಲಾರಿ ಚಾಲಕನ ಅಜಾಗರೂಕತೆಯಿಂದ ಹೈಡ್ರಾಲಿಕ್‌ ಟಿಪ್ಪರ್ ಮೇಲೆದ್ದಿತ್ತು. ಚಾಲಕ ಇದನ್ನು ಗಮನಿಸದೆ ಲಾರಿ ಚಾಲನೆ ಮಾಡಿದ್ದಾನೆ. ಲಾರಿ ವೇಗವಾಗಿ ಆಗಮಿಸಿದಾಗ ಸ್ವಾಗತ ಫಲಕಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಜಿಲ್ಲಾ ಕೇಂದ್ರಕ್ಕೆ ಸ್ವಾಗತಿಸುವ “ಕೈಮುಗಿದು ಒಳಗೆ ಬಾ, ಇದು ಜ್ಞಾನ ಕಾಶಿ ” ಫಲಕ ಸಮೇತ ಎರಡೂ ಬದಿಯ ಪಿಲ್ಲರ್‌ಗಳು ಕಿತ್ತು ಬಂದಿವೆ. ಈ ಘಟನೆ ಸಂಭವಿಸಿದಾಗ ಅದೃಷ್ಟವಶಾತ್ ಯಾವುದೇ ವಾಹನಗಳು, ಪಾದಚಾರಿಗಳ ಸಂಚಾರ ಇರಲಿಲ್ಲ. ಪರಿಣಾಮ ಭಾರಿ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *