ದಾವಣಗೆರೆ: ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ 2024ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಂದ ಸ್ವಾಭಿಮಾನ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಸ್ಎಸ್ಎಲ್ಸಿಯಲ್ಲಿ ಶೇ.80 ಮತ್ತು ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಕಚೇರಿ, ನಂ: 477, 1ನೇ ಮಹಡಿ, 5ನೇ ಮುಖ್ಯ ರಸ್ತೆ, 7ನೇ ಕ್ರಾಸ್, ಚೇತನಾ ಹೋಟೆಲ್ ರಸ್ತೆ, ಪಿ.ಜೆ. ಬಡಾವಣೆ, ದಾವಣಗೆರೆಅಥವಾ ಸಮಾಜದ ವೆಬ್ಸೈಟ್ನಲ್ಲಿ ಅರ್ಜಿ ಪಡೆದು, ಅಗತ್ಯ ಮಾಹಿತಿಗಳೊಂದಿಗೆ ಮೇ 25ರೊಳಗೆ ಕಚೇರಿಗೆಸಲ್ಲಿಸ ಬೇಕು. ಹೆಚ್ಚಿನ ಮಾಹಿತಿಗೆ ದೂ.08192-222008 ಇಲ್ಲಿಗೆ ಸಂಪರ್ಕಿಸಲು ಸಮಾಜದ ತಾಲೂಕು ಕಾರ್ಯದರ್ಶಿ ಮಂಜುನಾಥ ಪುರವಂತರ್ ತಿಳಿಸಿದ್ದಾರೆ.