Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಪ್ರತಿ ದಿನ 2 ಸಾವಿರ ಕೂಸೆಕ್ಸ್ ನಂತೆ 6 ದಿನ ನೀರಿಸಲು ಆದೇಶ

images 2024 03 26T152939.823

ದಾವಣಗೆರೆ

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಪ್ರತಿ ದಿನ 2 ಸಾವಿರ ಕೂಸೆಕ್ಸ್ ನಂತೆ 6 ದಿನ ನೀರಿಸಲು ಆದೇಶ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ನದಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮೇ.22ರ ರಾತ್ರಿ 10 ಗಂಟೆಯಿಂದ ಮೇ 28ರವರೆಗೆ ಪ್ರತಿ ದಿನ 2,000 ಕೂಸೆಕ್ಸ್ ನೀರು ಹರಿಸಲು ಸರ್ಕಾರ ಆದೇಶಿಸಿದೆ‌.

ಗದಗ, ಹಾವೇರಿ ಜಿಲ್ಲಾ ವ್ಯಾಪ್ತಿಗೆ ಬರುವ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕಾಗಿ ನದಿಗೆ ನೀರು ಹರಿಸಲಾಗುತ್ತಿದೆ. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲಿ, ಇತರೆ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪಂಪ್‍ಸೆಟ್‍ಗಳಿಂದ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು. ಭದ್ರಾ ನದಿಪಾತ್ರದಲ್ಲಿ ಮಳೆಯಾಗಿ 6 ರಿಂದ 8 ಸಾವಿರ ಕ್ಯೂಸೆಕ್ ಹರಿಯುವಾಗ ಡ್ಯಾನಿಂದ ಕುಡಿಯುವ ನೀರು ಒದಗಿಸುವ ಅಗತ್ಯವಿಲ್ಲ ಆದ್ದರಿಂದ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಭಾರತೀಯ ರೈತ ಒಕ್ಕೂಟದ ಅಧ್ಯಕ್ಷ ಲಿಂಗರಾಜ್ ಎಚ್ ಆರ್ ಶಾಮನೂರು ಆಗ್ರಹಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top