ಯೋಗೇಶ್ವರ್  ಅವರಿಗೆ ಸಚಿವ ಸ್ಥಾನ ನೀಡಲು ನನ್ನ ಪ್ರತಿರೋಧವಿಲ್ಲ: ರಾಮನಗರ ಬಜಿಪಿ ಜಿಲ್ಲಾಧ್ಯಕ್ಷ ರುದ್ರೇಶ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡುವುದಕ್ಕೆ ನನ್ನ ಪ್ರತಿರೋಧವಿಲ್ಲ ಎಂದು ರಾಮನಗರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎಂ.ರುದ್ರೇಶ್ ಸ್ಪಷ್ಟನೆ ನೀಡಿದರು.

ಬೆಂಗಳೂರಿನಲ್ಲಿ ಮಾತಾಡಿದ ರುದ್ರೇಶ್, ನಿನ್ನೆ  ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ ಶಾಸಕರ  ಸಭೆಗೆ ಹೋಗಿದ್ದ ನಿಜ.  ಈ ಸಭೆಯಲ್ಲಿದ್ದ ಶಾಸಕರಿಗೆ ಯೋಗೇಶ್ವರ್ ಅರಿಗೆ ಸಚಿವ  ಸ್ಥಾನ ಕೊಡುವುದನ್ನು ವಿರೋಧಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದೇನೆ. ಸೋತವರಿಗೆ ಮಂತ್ರಿ ಸ್ಥಾನ ಕೊಡೋದು ಗೆದ್ದಿರುವ ಅವರಿಗೆಲ್ಲ ಸಹಜವಾಗಿ ಬೇಸರವಾಗಿರಬಹುದು. ಆದರೆ ಹೈಕಮಾಂಡ್ ಯೋಗೇಶ್ವರ್ ಅವರಿಗೆ ಮಂತ್ರಿ ಸ್ಥಾನ ಕೊಟ್ಟರೆ ಅವರೂ ಒಪ್ಪಬಹುದು. ಆದರೆ, ನಾನು ಆಸಭೆಗೆ ಹೋಗಿದ್ದಕ್ಕೆ  ಬೇರೆ ಅರ್ಥ ಬೇಡ ಎಂದು ಸ್ಪಷ್ಟೀಕರಣ ನೀಡಿದರು.

ಯೋಗೇಶ್ವರ್ ಅವರು ನಮ್ಮ ಜಿಲ್ಲೆಯವರು. ನಾನೂ ರಾಮನಗರ ಜಿಲ್ಲೆಯವನಾಗಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೊಡಲು ಖಂಡಿತ ವಿರೋಧಿಸಿಲ್ಲ.ನಮ್ಮ ಜಿಲ್ಲೆಯವರಾದ ಯೋಗೇಶ್ವರ್ ರಿಗೆ ಸಚಿವ ಸ್ಥಾನ ಸಿಕ್ಕಿದರೆ ಅದು ನಮಗೆಲ್ಲ ಸಂತೋಷವೇ. ಇದರಿಂದ ನಮ್ಮ ಜಿಲ್ಲೆಯೂ ಅಭಿವೃದ್ಧಿ ಆಗಲಿದೆ ಎಂದು ಹೇಳಿದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *