ದಾವಣಗೆರೆ: ಕುರಿಗೆ ಸೊಪ್ಪು ತರಲು ಹೋಗಿದ್ದ ಕುರಿಗಾಹಿಗೆ ವಿದ್ಯುತ್ ಶಾಕ್; ಮರದಲ್ಲಿಯೇ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕುರಿಗೆ ಸೊಪ್ಪು ತರಲು ಹೋಗಿದ್ದ ಕುರಿಗಾಹಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ಮರದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹೊಸಪಾಳ್ಯ ಗ್ರಾಮದ ಮಳಲಹಳ್ಳಿ ರಸ್ತೆಯಲ್ಲಿ ನಡೆದಿದೆ.

ಕೊಟ್ರೇಶ್ (21) ಮೃತ ವ್ಯಕ್ತಿಯಾಗಿದ್ದು, ಮರವನ್ನೇರಿ ಕುರಿಗಳಿಗೆ ಸೊಪ್ಪು ಕಡಿಯುತ್ತಿದ್ದಾಗ ಆಕಸ್ಮಿಕ ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿದೆ. ಸೊಪ್ಪು ಕಡಿಯುತ್ತಿದ್ದ ಮರದಲ್ಲಿ ವಿದ್ಯುತ್ ತಂತಿಗಳು ಹಾದುಹೋಗಿದ್ದು, ಇದನ್ನು ಗಮನಿಸದ ಕುರಿಗಾಹಿ ಕೊಟ್ರೇಶ್ ಎಂದಿನಂತೆ ಬೆಳಿಗ್ಗೆ ಕುರಿಗಳಿಗೆ ಸೊಪ್ಪು ಕಡಿಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮೃತ ವ್ಯಕ್ತಿಗೆ ತಂದೆ, ತಾಯಿ, ಇಬ್ಬರು ಸಹೋದರಿಯರಿದ್ದಾರೆ. ಇವರು ಮೂಲತಃ ಹಾನಗಲ್ ತಾಲ್ಲೂಕು ಮಾಸ್ತಿಕಟ್ಟೆ ಗ್ರಾಮದವರು. ತುಂಬಾ ಹೊತ್ತು ಕಳೆದರು ಬಾರದೆ ಇದ್ದಾಗ ಅವರ ತಂದೆ ಹುಟುಕಾಟ ನಡೆಸಿದರು. ಆಗ ಮರದ ಮೇಲೆಯೇ ಮೃತಪಟ್ಟಿರುವುದು ಗೊತ್ತಾಗಿದೆ. ಮಲೆಬೆನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *