ದಾವಣಗೆರೆ: ಕಾನೂನು ಬಾಹಿರವಾಗಿ ನಾಲ್ಕು ತಿಂಗಳ ಮಗು ದತ್ತು ಪಡೆದ ದಂಪತಿ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಕಾನೂನು ಬಾಹಿರವಾಗಿ ನಾಲ್ಕು ತಿಂಗಳ ಮಗುವನ್ನು ದತ್ತು ಪಡೆದು ಮನೆಯಲ್ಲಿ ಸಾಕುತ್ತಿದ್ದ ದಂಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಿಕಿ ಶ್ರೀಮತಿ ವಾಸಂತಿ ಉಪ್ಪಾರ್ ಸೂಚಿಸಿದ್ದಾರೆ.

ದೊಡ್ಡಬಾತಿ ಗ್ರಾಮದ ದಾಸಪ್ಪರ ರಾಜಪ್ಪ, ಪತ್ನಿ ಮಂಜುಳಾ ಇವರು ಅನಧಿಕೃತವಾಗಿ ಸುಮಾರು 4 ತಿಂಗಳ ಹೆಣ್ಣು ಮಗುವನ್ನು ತಮ್ಮ ಮನೆಯಲ್ಲಿ ಇಟ್ಟುಕೊಂಡು ಸಾಕುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿ-1098 ಕ್ಕೆ ಕರೆ ಬಂದಿದೆ. ಈ ಹಿನ್ನೆಲೆ ಮೇ 24 ರಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಪ್ರತಿಭಾ ಎಂ.ಹೆಚ್., ಚಂದ್ರಶೇಖರ್ ಎನ್.ಕೆ. ಹಾಗೂ ಆಪ್ತ ಸಮಾಲೋಚಕಿ ಶ್ವೇತಾ ಐ.ಎಂ ಸ್ಥಳಕ್ಕೆ ಭೇಟಿ ನೀಡಿದ್ದಾಗ 4 ತಿಂಗಳ ಹೆಣ್ಣು ನವಜಾತ ಶಿಶು ಕಂಡು ಬಂದಿದೆ.

ಮಗುವಿನ ಬಗ್ಗೆ ಮಾಹಿತಿ ಕೇಳಿದಾಗ ಈ ಮಗು ನನಗೆ ಪರಿಚಯ ಇರುವ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೇ ಹೊಸೂರು ಗ್ರಾಮದ ಕುಸುಮಾ(30) ಅವರಿಗೆ ಹಾವೇರಿ ಜಿಲ್ಲೆ ಬ್ಯಾಡಗಿಯ ವೈದ್ಯರಾದ ಚೈತುನಬಿ ಮ, ಸೌದಾಗರ(ಪಾರಂಪರಿಕ ಹಾಗೂ ತರಬೇತಿ ಹೊಂದಿದ ದಾಯಿ) ಇವರ ಮನೆಯಲ್ಲಿ ಹೆರಿಗೆ ಆಗಿದ್ದು, ಇವರಿಂದ ನಾವು ಮಗು ಪಡೆದುಕೊಂಡು ನಾವೇ ತಂದೆ- ತಾಯಿ ಎಂದು ಬ್ಯಾಡಗಿ ಪುರಸಭೆ ಕಾರ್ಯಾಲಯದಲ್ಲಿ ಜನನ ಪ್ರಮಾಣ ಪತ್ರವನ್ನು ಸಹ ಪಡೆದಿರುತ್ತೇವೆಂದು ತಿಳಿಸಿದ್ದಾರೆ.

ಈ ಖಚಿತ ಮಾಹಿತಿ ಮೇರೆಗೆ ಬಾಲನ್ಯಾಯ ಕಾಯ್ದೆ-2015 ರಡಿಯಲ್ಲಿ ಈ ಮಗುವನ್ನು ಅನಧಿಕೃತವಾಗಿ ಪಡೆದುಕೊಂಡು ಜನನ ಪ್ರಮಾಣ ಪತ್ರವನ್ನು ಸಹ ಸುಳ್ಳು ದಾಖಲಾತಿ ಮುಖಾಂತರ ಸೃಷ್ಟಿಸಿಕೊಂಡಿರುವುದು ಕಾನೂನು ಉಲ್ಲಂಘನೆಯಾಗಿರುತ್ತದೆ. ಮಗುವನ್ನು ನೀಡಿದವರು, ಪಡೆದವರು ಮತ್ತು ಜನನ ಪ್ರಮಾಣ ಪತ್ರ ಸೃಷ್ಟಿಸಲು ಸಹಕಾರ ನೀಡಿದ ಎಲ್ಲರ ವಿರುದ್ಧ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಿ ಕ್ರಮ ಕೈಗೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಿಕಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್, ಇವರು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಿ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *