ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು, ಎರಡ್ಮೂರು ದಿನದಲ್ಲಿ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ, ಉತ್ತರ ಒಳನಾಡಿನ ಹುತೇಕ ಭಾಗವನ್ನು ಆವರಿಸಿರುವ ಅಬ್ಬರಿಸಲಿದೆ.
ಜೂ. 4ರಿಂದ ಮೂರು ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ,ಉಡುಪಿ, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮುಂದಿನ ಐದು ದಿನ ಹಾಗೂ ಬೆಂಗಳೂರು, ಬೆಂ.ಗ್ರಾಮಾಂತರ, ಹಾಸನ, ಚಿಕ್ಕಮಗಳೂರು,ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಗುಡುಗು ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆ ಬೀಳಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಜಿಲ್ಲೆಯಲ್ಲಿ ಯೆಲ್ಲೋ ಅರ್ಲಟ್ ಘೋಷಿಸಿದೆ.
ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ ಜೋರು ಗಾಳಿ ಬೀಸಲಿದೆ. ವಿಜಯಪುರ, ಬಳ್ಳಾರಿಯಲ್ಲಿ ಜೂ 4ರಂದು ಹಾಗೂ ರಾಯಚೂರು,ಯಾದಗಿರಿ, ಕೋಲಾರ ಜೂ 5ರಂದು ಯೆಲ್ಲೋ ಅರ್ಲಟ್ ಇರಲಿದೆ. ಉಳಿದೆಡೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. .



