Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ವಂತ ಮನೆ ಕಟ್ಟುವ ಯೋಜನೆ ಇದ್ಯಾ? ವಾಜಪೇಯಿ ವಸತಿ ಯೋಜನೆಯಡಿ ಇಂದೇ ಅರ್ಜಿ ಸಲ್ಲಿಸಿ; 30 ದಿನ ಮಾತ್ರ ಅವಕಾಶ

vajapeyi vasati yojana

ದಾವಣಗೆರೆ

ದಾವಣಗೆರೆ: ಸ್ವಂತ ಮನೆ ಕಟ್ಟುವ ಯೋಜನೆ ಇದ್ಯಾ? ವಾಜಪೇಯಿ ವಸತಿ ಯೋಜನೆಯಡಿ ಇಂದೇ ಅರ್ಜಿ ಸಲ್ಲಿಸಿ; 30 ದಿನ ಮಾತ್ರ ಅವಕಾಶ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿನ ಸಾರ್ವಜನಿಕರ ಶಿಥಿಲಗೊಂಡಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವ ನಿವಾಸಿಗಳಿಗೆ ಡಾ; ಬಿ.ಆರ್.ಅಂಬೇಡ್ಕರ್, ವಾಜಪೇಯಿ ವಸತಿ ಯೋಜನೆಯಡಿಯಲ್ಲಿ ಮನೆ ಕಟ್ಟಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ 50, ಸಾಮಾನ್ಯ 329 ಸೇರಿ ಒಟ್ಟು. 379 ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ 86, ಪರಿಶಿಷ್ಟ ಪಂಗಡ 35, ಒಟ್ಟು 500 ಹೆಚ್ಚುವರಿಯಾಗಿ ನಿಗದಿಪಡಿಸಲಾಗಿದ್ದು ಮನೆ ನಿರ್ಮಿಸಿಕೊಳ್ಳುವ ಫಲಾನುಭವಿಗಳನ್ನು ಆಯ್ಕೆ ಮಾಡಲು ಅವಕಾಶವಿರುತ್ತದೆ.

ಆಸಕ್ತಿಯುಳ್ಳ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ (ಗಂಡ ಮತ್ತು ಹೆಂಡತಿ), ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಚಾಲ್ತಿ ಸಾಲಿನ ಇ-ಸ್ವತ್ತು, ಇ.ಸಿ., ನಕಲು ಪ್ರತಿ ಮತ್ತು 2 ಭಾವಚಿತ್ರ ಹಾಗೂ ಅರ್ಜಿಯೊಂದಿಗೆ ಪ್ರಕಟಣೆ ಹೊರಡಿಸಿದ 30 ದಿನದೊಳಗಾಗಿ ಪಾಲಿಕೆ ಕಚೇರಿಗೆ ಸಲ್ಲಿಸಲು ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top