ದಾವಣಗೆರೆ: ಪೋಕ್ಸೋ ಕೇಸ್ ನಲ್ಲಿ ಬಂಧನ ಭೀತಿ ಎದುರಿಸಿದ್ದ ಮಾಜಿ ಸಿಎಂ ಯಡಿಯೂರಪ್ಪ ಪರ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬ್ಯಾಟ್ ಬೀಸಿದ್ದಾರೆ. ಯಾರೋ ದಾರಿಯಲ್ಲಿ ಹೋಗೋರು ಕಂಪ್ಲೆಂಟ್ ಕೊಟ್ರೆ ಅರೆಸ್ಟ್ ಮಾಡ್ಕಾಗುತ್ತಾ..? ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಸಾಬೀತಾದ ಮೇಲೆ ಬಂಧನ ಮಾಡಬಹುದು. ಆದರೆ, ಯಾರೋ ಹೆಣ್ಣು ಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನ ಮಾಡೋಕಾಗುತ್ತಾ..?ಯಾರೋ ದಾರಿಯಲ್ಲಿ ಹೋಗೋರು ಕಂಪ್ಲೆಂಟ್ ಕೊಟ್ರೆ ಅರೆಸ್ಟ್ ಎಂದರೆ ಏನ್ ಅರ್ಥ ಎಂದು ಕಿಡಿಕಾರಿದ್ದಾರೆ.ದೂರು ನೀಡಿದ ಮಹಿಳೆ 55 ಜನರ ವಿರುದ್ಧ ಇಂತಹ ದೂರು ನೀಡಿದ್ದಾಳೆ. ಇಂತಹದಕ್ಕೆ ಬೆಲೆ ಇದೆಯಾ..? ಎಂದರು.
ದರ್ಶನ್ ಮೇಲೆ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದರು.



