ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ತಗ್ಗಿದ್ದು, ಮುಂದಿನ ಒಂದು ವಾರ ಜೋರು ಮಳೆ ಅಬ್ಬರ ಇರುವುದಿಲ್ಲ. ಕರಾವಳಿ ಜಿಲ್ಲೆಗಳ ಕೆಲವು ಭಾಗದಲ್ಲಿ ಮಾತ್ರ ಇಂದಿನಿಂದ (ಜೂ.16) ಜೂ.21ರವರೆಗೆ ಹಗುರವಾಗಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಬಿದ್ದ ಕಡೆ ಬಿತ್ತನೆ ಕಾರ್ಯಕ್ಕೆ ಜೋರಾಗಿ ನಡೆಯುತ್ತಿದೆ. ಜೂ.16ರಿಂದ ಜೂ.19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಮಳೆ ಜೂ.1ರಿಂದ ಆರಂಭವಾಗಿ ಜೂ.14ರವರೆಗೂ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗಿದೆ.
ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಸಂಭವಿಸುವ ಸಾಧ್ಯತೆಯಿರುವ ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಸಂಬಂಧಿಸಿದ ಹಗುರ ಮಳೆ/ಗುಡುಗು ಸಹಿತ ಮಳೆಯಾಗಲಿದೆ.
ಜೂ.20ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಕರಾವಳಿ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಜೂ.20 ಮತ್ತು ಜೂ.21ರಂದು ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿಯ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.



