ದಾವಣಗೆರೆ: ಮನೆಯ ಮೋಟಾರ್ ಆನ್ ಮಾಡುವಾಗ ವಿದ್ಯುತ್ ತಗುಲಿ ಬಾಲಕ ಸಾವನಪ್ಪಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೋಗಿಲು ಗ್ರಾಮದಲ್ಲಿ ನಡೆದಿದೆ.
ಮನೆಯ ಮುಂದೆ ನೀರಿನ ನಲ್ಲಿಗೆ ಮೋಟಾರ್ ಅಳವಡಿಸುತ್ತಿದ್ದಾಗ ವಿದ್ಯುತ್ ತಗುಲಿ ಈ ದುರಂತ ಸಂಭವಿಸಿದೆ. ಸೋಗಿಲು ಗ್ರಾಮದ ಸೋಮ್ಮಾನಾಯ್ಕ ಪತ್ನಿ ವಿನೋಧಬಾಯಿ ಪುತ್ರ ವಾಸುನಾಯ್ಕ(10) ವಿದ್ಯುತ್ ಸ್ಪರ್ಶಕ್ಕೆ ಬಲಿಯಾದ ಬಾಡಲಕ. ತಂದೆ- ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ವಿಷಯತಿಳಿದು ತಕ್ಷಣ ಹೊಲದಿಂದ ಓಡಿ ಬಂದ ದಂಪತಿಗಳು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಪರೀಕ್ಷಿಸಿ ಮಾರ್ಗಮಧ್ಯೆಯೇ
ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.